News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

News Hour: ಏರುತ್ತಲೇ ಇದೆ ಕೊರೋನಾ ದಿನಕ್ಕೆ 30 ಸಾವಿರ, ಲಾಕ್‌ಡೌನ್ ಇಲ್ಲವೇ ಇಲ್ಲ

Published : Jan 15, 2022, 12:25 AM ISTUpdated : Jan 15, 2022, 12:26 AM IST

* ಕರ್ನಾಟಕದಲ್ಲಿ ಕೊರೋನಾ ಏರಿಕೆ, 28 ಸಾವಿರ ಹೊಸ ಕೇಸ್
* ಪಾದಯಾತ್ರೆಗೆ ಭದ್ರತೆಗೆ ತೆರಳಿದ್ದ ಪೊಲೀಸ್ ಸಿಬ್ಬಂದಿಗೂ ಆತಂಕ
* ಕಠಿಣ ನಿಯಮಗಳು, ಲಾಕ್ ಡೌನ್ ಮಾತು ಇಲ್ಲ
* ಕಾವೇರುತ್ತಿರುವ ಪಂಚರಾಜ್ಯ ಚುನಾವಣೆ

ಬೆಂಗಳೂರು(ಜ. 15)  ಕೊರೋನಾ (Coronavirus) ಪ್ರಕರಣದಲ್ಲಿ ದಿನೇ ದಿನೇ (Karnataka) ಏರಿಕೆ ಆಗುತ್ತಿರುವ ಆತಂಕ ಇರುವಾಗಲೇ ನಾಡಿನಾದ್ಯಂತ ಶುಕ್ರವಾರ ಸಂಭ್ರಮದಿಂದ ಮಕರ ಸಂಕ್ರಾಂತಿ (Makara Samkranti) ಆಚರಿಸಲಾಗಿದೆ. ಕೊರೋನಾ ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲೂ ಈಗ ಸೋಂಕು ಏರಿಕೆ ಆಗುವ ಅಪಾಯ ಇದರಿಂದ ಕಾಣುತ್ತಿದೆ. ರಾಜ್ಯದಲ್ಲಿ ಕರೋನಾ ಮೂರನೇ ಅಲೆಯ ಆರ್ಭಟ ಜೋರಾಗಿದೆ. ಹಾಸ್ಟೆಲ್ ಹಾಗೂ ಪಿಜಿಗಳಲ್ಲಿ ಕರೋನಾ ಸ್ಪೋಟವಾಗಿದ್ದರೆ, ಪಾದಯಾತ್ರೆಯ ಡ್ಯೂಟಿಗೆ ಹೋಗಿದ್ದ ಪೊಲೀಸರಲ್ಲೂ (Karnataka Police) ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. 

ಕೊರೊನಾ ಲಸಿಕೆ ಪಡೆಯದವರಿಗೆ ಒಮಿಕ್ರಾನ್ ಅಪಾಯಕಾರಿ WHO ಎಚ್ಚರಿಕೆ

ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಅದರಲ್ಲೂ ದೇಶದಲ್ಲೇ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರಪ್ರದೇಶ ರಾಜ್ಯದಲ್ಲಿ ಚುನಾವಣಾ ಪೂರ್ವ ಪಕ್ಷಾಂತರ ಹೆಚ್ಚಾಗಿದೆ. ಇತ್ತ ಬಿಜೆಪಿ (BJP) ಬಿಟ್ಟ ಶಾಸಕರು ಅಖಿಲೇಶ್‌ ಯಾದವ್‌ ಅವರ ಸಮಾಜವಾದಿ ಪಕ್ಷವನ್ನು ಸೇರುತ್ತಿದ್ದು, ಉತ್ತರಪ್ರದೇಶದಲ್ಲಿ (Uttar Pradesh) ಈಗ ಯೋಗಿ ವರ್ಸಸ್‌ ಅಖಿಲೇಶ್ ಎಂಬಂತಾಗಿದೆ. ದಲಿತರ ಮನೆಯಲ್ಲಿ ಇಂದು ಭೋಜನ ಮಾಡಿದ ಸಿಎಂ ಯೋಗಿ ವಿರೋಧಿಗಳಿಗೆ ಈ ಮೂಲಕ ತಿರುಗೇಟು ನೀಡುತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more