ಕಂತೆ ಕಂತೆ ದುಡ್ಡೆಲ್ಲಾ ಯಾರ ಸ್ವತ್ತು..? ಹೇಗೆ ಬಂತು..? ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಧೀರಜ್ ಸಾಹು..?

ಕಂತೆ ಕಂತೆ ದುಡ್ಡೆಲ್ಲಾ ಯಾರ ಸ್ವತ್ತು..? ಹೇಗೆ ಬಂತು..? ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಧೀರಜ್ ಸಾಹು..?

Published : Dec 18, 2023, 02:27 PM IST

350 ಕೋಟಿಯ ರಹಸ್ಯವನ್ನ ಬಾಯ್ಬಿಟ್ಟರಾ ಕಾಂಗ್ರೆಸ್ ಸಂಸದ..? 
ಕೋಟಿ ಕೋಟಿ ಆಸ್ತಿಯ ಹಿಂದೆ ಅಡಗಿರೋದು ಯಾರ ಕೈವಾಡ.?  
ಕೋಟಿ ಕೋಟೆಯ ಹಿಂದೆ ಕಾಂಗ್ರೆಸ್  ಕೈವಾಡ! ಸಾಹು ಹೇಳಿದ್ದೇನು..?


ದುಡ್ಡು..ದುಡ್ಡು..ದುಡ್ಡು..ಎಲ್ಲಿ ನೋಡಿದ್ರೂ ರಾಶಿ ರಾಶಿ ನೋಟು. ಆ ನೋಟಿನ ಕಂತೆ  ಎಣಿಸೋಕಾಗದೆ ಮಿಷಿನ್‌ನೇ ಕೆಟ್ಟೋಯ್ತು. ಕಾಸಿನ ಕೋಟೆ ನೋಡಿ ಅಧಿಕಾರಿಗಳೇ ಸುಸ್ತಾದ್ರು. ನೋಡಿದೋರಿಗೆಲ್ಲಾ ಇದು ಸಂಸದನ ಮನೆ ಅಲ್ಲ. ನೋಟಿನ ಕೋಟೆ ಅನ್ನೋದು ಮನವರಿಕೆಯಾಯ್ತು. ಧೀರಜ್ ಸಾಹು ಒಡಿಶಾದ ಕಾಂಗ್ರೆಸ್ ಸಂಸದ(Congress MP). ಅಕ್ರಮ ಆಸ್ತಿಗಳಿಕೆ(Illegal property acquisition) ಅನುಮಾನದ ಮೇಲೆ ಐಟಿ ಪಡೆ ಸಾಹುಗೆ ಸಂಬಂಧಪಟ್ಟ ಹತ್ತಾರು ಕಡೆ ದಾಳಿ ನಡೆಸಿತ್ತು. ದಾಳಿ ನಡೀವಾಗ ಇಂಥದ್ದೊಂದು ಆಘಾತಕಾರಿ, ಅಚ್ಚರಿ ಬೇಟೆ ನಡೆಯಲಿದೆ ಅನ್ನೋದು ಆ ಅಧಿಕಾರಿಗಳಿಗೂ ಗೊತ್ತಿರ್ಲಿಲ್ವೋ ಏನೋ. ಆದ್ರೆ, ಧೀರಜ್ ಸಾಹು(Dheeraj Sahu) ಹಾಗೂ ಅವರ ಆಪ್ತರ ಮನೆಗಳ ಮೇಲೆ ರೈಡ್ ನಡೆದಾಗ, ನೋಟಿನ ದೇವತೆ ಅವರ ಮನೆಗಳಲ್ಲಿ ತಾಂಡವ ಆಡ್ತಾ ಇದ್ಲು. ಈ ದಾಳಿಲಿ ಸಿಕ್ಕಿರೋ ನೋಟಿನ ಬೆಲೆ ಎಷ್ಟು ಅನ್ನೋದನ್ನ ಲೆಕ್ಕಾ ಹಾಕೋಕೆ, ಒಂದಲ್ಲಾ ಎರಡಲ್ಲಾ, ಬರೋಬ್ಬರಿ ಒಂದು ಡಜನ್ ನೋಟು ಎಣಿಸೋ ಮಿಷಿನ್‌ಗಳನ್ನ ತರಸ್ಕೊಂಡಿದ್ರು. ಭುವನೇಶ್ವರದಿಂದ ಮಿಷಿನ್ ತರುಸ್ಕೊಂಡು ನೋಟು ಎಣಿಸಿದ್ರು ಅಧಿಕಾರಿಗಳು. ಒಂದಲ್ಲಾ ಎರಡಲ್ಲಾ, ಹೆಚ್ಚೂಕಮ್ಮಿ ಒಂದು ವಾರಗಳ ಕಾಲ ನಡೆದ ರೈಡ್ ಇದು. ಒಡಿಶಾ, ಜಾರ್ಖಂಡ್, ದೆಹಲಿ, ಈ ಮೂರೂ ರಾಜ್ಯಗಳಲ್ಲಿ, ಧಿರಜ್ ಸಾಹು ನಿಗೂಢ ವ್ಯವಹಾರ ನಡೆಸಿದ್ರು ಅನ್ನೋ ಮಾಹಿತಿ ಇದೆ. ಅದರ ಆಧಾರದ ಮೇಲೇ ಹೆಚ್ಚುಕಮ್ಮಿ ಒಂದು ಡಜನ್ ಜಾಗಗಳಲ್ಲಿ ಶೋಧ ಕಾರ್ಯ ನಡೀದಿತ್ತು. ಈ ಪರಿ ಲೆಕ್ಕಕ್ಕೆ ಸಿಗದ ದುಡ್ಡು ಪತ್ತೆಯಾಗಿರೋದು, ಕಾಂಗ್ರೆಸ್  ಸಂಸದರ ಮನೆಯಲ್ಲಿ.

ಇದನ್ನೂ ವೀಕ್ಷಿಸಿ:  ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು: ಹೊಸ ವರ್ಷಕ್ಕೆ ಪಾಲಿಕೆ, ಪೊಲೀಸ್ ಇಲಾಖೆ ಗೈಡ್‌ಲೈನ್ಸ್ ರೆಡಿ !

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more