ಕಂತೆ ಕಂತೆ ದುಡ್ಡೆಲ್ಲಾ ಯಾರ ಸ್ವತ್ತು..? ಹೇಗೆ ಬಂತು..? ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಧೀರಜ್ ಸಾಹು..?

ಕಂತೆ ಕಂತೆ ದುಡ್ಡೆಲ್ಲಾ ಯಾರ ಸ್ವತ್ತು..? ಹೇಗೆ ಬಂತು..? ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಧೀರಜ್ ಸಾಹು..?

Published : Dec 18, 2023, 02:27 PM IST

350 ಕೋಟಿಯ ರಹಸ್ಯವನ್ನ ಬಾಯ್ಬಿಟ್ಟರಾ ಕಾಂಗ್ರೆಸ್ ಸಂಸದ..? 
ಕೋಟಿ ಕೋಟಿ ಆಸ್ತಿಯ ಹಿಂದೆ ಅಡಗಿರೋದು ಯಾರ ಕೈವಾಡ.?  
ಕೋಟಿ ಕೋಟೆಯ ಹಿಂದೆ ಕಾಂಗ್ರೆಸ್  ಕೈವಾಡ! ಸಾಹು ಹೇಳಿದ್ದೇನು..?


ದುಡ್ಡು..ದುಡ್ಡು..ದುಡ್ಡು..ಎಲ್ಲಿ ನೋಡಿದ್ರೂ ರಾಶಿ ರಾಶಿ ನೋಟು. ಆ ನೋಟಿನ ಕಂತೆ  ಎಣಿಸೋಕಾಗದೆ ಮಿಷಿನ್‌ನೇ ಕೆಟ್ಟೋಯ್ತು. ಕಾಸಿನ ಕೋಟೆ ನೋಡಿ ಅಧಿಕಾರಿಗಳೇ ಸುಸ್ತಾದ್ರು. ನೋಡಿದೋರಿಗೆಲ್ಲಾ ಇದು ಸಂಸದನ ಮನೆ ಅಲ್ಲ. ನೋಟಿನ ಕೋಟೆ ಅನ್ನೋದು ಮನವರಿಕೆಯಾಯ್ತು. ಧೀರಜ್ ಸಾಹು ಒಡಿಶಾದ ಕಾಂಗ್ರೆಸ್ ಸಂಸದ(Congress MP). ಅಕ್ರಮ ಆಸ್ತಿಗಳಿಕೆ(Illegal property acquisition) ಅನುಮಾನದ ಮೇಲೆ ಐಟಿ ಪಡೆ ಸಾಹುಗೆ ಸಂಬಂಧಪಟ್ಟ ಹತ್ತಾರು ಕಡೆ ದಾಳಿ ನಡೆಸಿತ್ತು. ದಾಳಿ ನಡೀವಾಗ ಇಂಥದ್ದೊಂದು ಆಘಾತಕಾರಿ, ಅಚ್ಚರಿ ಬೇಟೆ ನಡೆಯಲಿದೆ ಅನ್ನೋದು ಆ ಅಧಿಕಾರಿಗಳಿಗೂ ಗೊತ್ತಿರ್ಲಿಲ್ವೋ ಏನೋ. ಆದ್ರೆ, ಧೀರಜ್ ಸಾಹು(Dheeraj Sahu) ಹಾಗೂ ಅವರ ಆಪ್ತರ ಮನೆಗಳ ಮೇಲೆ ರೈಡ್ ನಡೆದಾಗ, ನೋಟಿನ ದೇವತೆ ಅವರ ಮನೆಗಳಲ್ಲಿ ತಾಂಡವ ಆಡ್ತಾ ಇದ್ಲು. ಈ ದಾಳಿಲಿ ಸಿಕ್ಕಿರೋ ನೋಟಿನ ಬೆಲೆ ಎಷ್ಟು ಅನ್ನೋದನ್ನ ಲೆಕ್ಕಾ ಹಾಕೋಕೆ, ಒಂದಲ್ಲಾ ಎರಡಲ್ಲಾ, ಬರೋಬ್ಬರಿ ಒಂದು ಡಜನ್ ನೋಟು ಎಣಿಸೋ ಮಿಷಿನ್‌ಗಳನ್ನ ತರಸ್ಕೊಂಡಿದ್ರು. ಭುವನೇಶ್ವರದಿಂದ ಮಿಷಿನ್ ತರುಸ್ಕೊಂಡು ನೋಟು ಎಣಿಸಿದ್ರು ಅಧಿಕಾರಿಗಳು. ಒಂದಲ್ಲಾ ಎರಡಲ್ಲಾ, ಹೆಚ್ಚೂಕಮ್ಮಿ ಒಂದು ವಾರಗಳ ಕಾಲ ನಡೆದ ರೈಡ್ ಇದು. ಒಡಿಶಾ, ಜಾರ್ಖಂಡ್, ದೆಹಲಿ, ಈ ಮೂರೂ ರಾಜ್ಯಗಳಲ್ಲಿ, ಧಿರಜ್ ಸಾಹು ನಿಗೂಢ ವ್ಯವಹಾರ ನಡೆಸಿದ್ರು ಅನ್ನೋ ಮಾಹಿತಿ ಇದೆ. ಅದರ ಆಧಾರದ ಮೇಲೇ ಹೆಚ್ಚುಕಮ್ಮಿ ಒಂದು ಡಜನ್ ಜಾಗಗಳಲ್ಲಿ ಶೋಧ ಕಾರ್ಯ ನಡೀದಿತ್ತು. ಈ ಪರಿ ಲೆಕ್ಕಕ್ಕೆ ಸಿಗದ ದುಡ್ಡು ಪತ್ತೆಯಾಗಿರೋದು, ಕಾಂಗ್ರೆಸ್  ಸಂಸದರ ಮನೆಯಲ್ಲಿ.

ಇದನ್ನೂ ವೀಕ್ಷಿಸಿ:  ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು: ಹೊಸ ವರ್ಷಕ್ಕೆ ಪಾಲಿಕೆ, ಪೊಲೀಸ್ ಇಲಾಖೆ ಗೈಡ್‌ಲೈನ್ಸ್ ರೆಡಿ !

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more