ಕಂತೆ ಕಂತೆ ದುಡ್ಡೆಲ್ಲಾ ಯಾರ ಸ್ವತ್ತು..? ಹೇಗೆ ಬಂತು..? ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಧೀರಜ್ ಸಾಹು..?

ಕಂತೆ ಕಂತೆ ದುಡ್ಡೆಲ್ಲಾ ಯಾರ ಸ್ವತ್ತು..? ಹೇಗೆ ಬಂತು..? ಆ ದುಡ್ಡಿನ ಸಾಮ್ರಾಜ್ಯ ಕಟ್ಟಿದ್ದು ಹೇಗೆ ಧೀರಜ್ ಸಾಹು..?

Published : Dec 18, 2023, 02:27 PM IST

350 ಕೋಟಿಯ ರಹಸ್ಯವನ್ನ ಬಾಯ್ಬಿಟ್ಟರಾ ಕಾಂಗ್ರೆಸ್ ಸಂಸದ..? 
ಕೋಟಿ ಕೋಟಿ ಆಸ್ತಿಯ ಹಿಂದೆ ಅಡಗಿರೋದು ಯಾರ ಕೈವಾಡ.?  
ಕೋಟಿ ಕೋಟೆಯ ಹಿಂದೆ ಕಾಂಗ್ರೆಸ್  ಕೈವಾಡ! ಸಾಹು ಹೇಳಿದ್ದೇನು..?


ದುಡ್ಡು..ದುಡ್ಡು..ದುಡ್ಡು..ಎಲ್ಲಿ ನೋಡಿದ್ರೂ ರಾಶಿ ರಾಶಿ ನೋಟು. ಆ ನೋಟಿನ ಕಂತೆ  ಎಣಿಸೋಕಾಗದೆ ಮಿಷಿನ್‌ನೇ ಕೆಟ್ಟೋಯ್ತು. ಕಾಸಿನ ಕೋಟೆ ನೋಡಿ ಅಧಿಕಾರಿಗಳೇ ಸುಸ್ತಾದ್ರು. ನೋಡಿದೋರಿಗೆಲ್ಲಾ ಇದು ಸಂಸದನ ಮನೆ ಅಲ್ಲ. ನೋಟಿನ ಕೋಟೆ ಅನ್ನೋದು ಮನವರಿಕೆಯಾಯ್ತು. ಧೀರಜ್ ಸಾಹು ಒಡಿಶಾದ ಕಾಂಗ್ರೆಸ್ ಸಂಸದ(Congress MP). ಅಕ್ರಮ ಆಸ್ತಿಗಳಿಕೆ(Illegal property acquisition) ಅನುಮಾನದ ಮೇಲೆ ಐಟಿ ಪಡೆ ಸಾಹುಗೆ ಸಂಬಂಧಪಟ್ಟ ಹತ್ತಾರು ಕಡೆ ದಾಳಿ ನಡೆಸಿತ್ತು. ದಾಳಿ ನಡೀವಾಗ ಇಂಥದ್ದೊಂದು ಆಘಾತಕಾರಿ, ಅಚ್ಚರಿ ಬೇಟೆ ನಡೆಯಲಿದೆ ಅನ್ನೋದು ಆ ಅಧಿಕಾರಿಗಳಿಗೂ ಗೊತ್ತಿರ್ಲಿಲ್ವೋ ಏನೋ. ಆದ್ರೆ, ಧೀರಜ್ ಸಾಹು(Dheeraj Sahu) ಹಾಗೂ ಅವರ ಆಪ್ತರ ಮನೆಗಳ ಮೇಲೆ ರೈಡ್ ನಡೆದಾಗ, ನೋಟಿನ ದೇವತೆ ಅವರ ಮನೆಗಳಲ್ಲಿ ತಾಂಡವ ಆಡ್ತಾ ಇದ್ಲು. ಈ ದಾಳಿಲಿ ಸಿಕ್ಕಿರೋ ನೋಟಿನ ಬೆಲೆ ಎಷ್ಟು ಅನ್ನೋದನ್ನ ಲೆಕ್ಕಾ ಹಾಕೋಕೆ, ಒಂದಲ್ಲಾ ಎರಡಲ್ಲಾ, ಬರೋಬ್ಬರಿ ಒಂದು ಡಜನ್ ನೋಟು ಎಣಿಸೋ ಮಿಷಿನ್‌ಗಳನ್ನ ತರಸ್ಕೊಂಡಿದ್ರು. ಭುವನೇಶ್ವರದಿಂದ ಮಿಷಿನ್ ತರುಸ್ಕೊಂಡು ನೋಟು ಎಣಿಸಿದ್ರು ಅಧಿಕಾರಿಗಳು. ಒಂದಲ್ಲಾ ಎರಡಲ್ಲಾ, ಹೆಚ್ಚೂಕಮ್ಮಿ ಒಂದು ವಾರಗಳ ಕಾಲ ನಡೆದ ರೈಡ್ ಇದು. ಒಡಿಶಾ, ಜಾರ್ಖಂಡ್, ದೆಹಲಿ, ಈ ಮೂರೂ ರಾಜ್ಯಗಳಲ್ಲಿ, ಧಿರಜ್ ಸಾಹು ನಿಗೂಢ ವ್ಯವಹಾರ ನಡೆಸಿದ್ರು ಅನ್ನೋ ಮಾಹಿತಿ ಇದೆ. ಅದರ ಆಧಾರದ ಮೇಲೇ ಹೆಚ್ಚುಕಮ್ಮಿ ಒಂದು ಡಜನ್ ಜಾಗಗಳಲ್ಲಿ ಶೋಧ ಕಾರ್ಯ ನಡೀದಿತ್ತು. ಈ ಪರಿ ಲೆಕ್ಕಕ್ಕೆ ಸಿಗದ ದುಡ್ಡು ಪತ್ತೆಯಾಗಿರೋದು, ಕಾಂಗ್ರೆಸ್  ಸಂಸದರ ಮನೆಯಲ್ಲಿ.

ಇದನ್ನೂ ವೀಕ್ಷಿಸಿ:  ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು: ಹೊಸ ವರ್ಷಕ್ಕೆ ಪಾಲಿಕೆ, ಪೊಲೀಸ್ ಇಲಾಖೆ ಗೈಡ್‌ಲೈನ್ಸ್ ರೆಡಿ !

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more