ಅಪಾಯ ತಂದೊಡ್ಡಿತಾ ದೇವರ ಕೋಪ..?  ಕತ್ತಲೆ ಕೂಪದಿಂದ ಪಾರಾಗೋಕೆ ಇನ್ನೆಷ್ಟು ಸಮಯ ಬೇಕು..?

ಅಪಾಯ ತಂದೊಡ್ಡಿತಾ ದೇವರ ಕೋಪ..? ಕತ್ತಲೆ ಕೂಪದಿಂದ ಪಾರಾಗೋಕೆ ಇನ್ನೆಷ್ಟು ಸಮಯ ಬೇಕು..?

Published : Nov 22, 2023, 12:40 PM IST

240 ಗಂಟೆಯಿಂದಲೂ ಸುರಂಗ ನರಕದಲ್ಲಿ 41 ಮಂದಿ..!
ಬೌಖ್ನಾಗ್ ಬಾಬಾ ಮೊರೆ ಹೋಗಿದ್ದೇಕೆ  ಆ ಊರಿನ ಜನ..?
ಒಂದು  ಮುನ್ನೆಚ್ಚರಿಕೆ ತಪ್ಪಿಸುತ್ತು ದೊಡ್ಡ ಅನಾಹುತ..?
 

ಒಂದಲ್ಲ..ಎರಡಲ್ಲಾ..ವಾರವಲ್ಲ..ಬರೋಬ್ಬರಿ 10 ದಿನ..10 ದಿನಗಳಿಂದಲೂ ನಮ್ಮ ದೇಶದ 41 ಮಂದಿ ಕಾರ್ಮಿಕರು ರೌರವ ನರಕ ಅನುಭವಿಸ್ತಾ ಇದಾರೆ.ಈ ಸುರಂಗದೊಳಗೇ(Tunnel) ಸಿಲುಕಿದ್ದಾರೆ, 41 ಮಂದಿ ಕಾರ್ಮಿಕರು. ಕಳೆದ 10 ದಿನಗಳಿಂದಲೂ, ಇಂದಲ್ಲಾ ನಾಳೆ ಸೂರ್ಯೋದಯ ನೋಡ್ತೀವಿ ಅಂತ ಕಾಯ್ತಾ ಇದಾರೆ.. ಆದ್ರೆ ಅವರ ಬಾಳನ್ನ ಕವಿದಿರೋ ಅಂಧಕಾರ ಮಾತ್ರ, ರಾಕ್ಷಸನ ಹಾಗೆ ಆವರಿಸಿಕೊಂಡುಬಿಟ್ಟಿದೆ.. ಬದುಕು ನರಕವಾಗಿದೆ. ಒಂದ್ ಕಡೆ ಸುರಂಗದೊಳಗೆ ಸಿಲುಕಿದವರ ನರಕಯಾತನೆಯಾದ್ರೆ, ಇನ್ನೊಂದ್ ಕಡೆ ತನ್ನ ಕುಟುಂಬದವರ ಪರಿಸ್ಥಿತಿ ನೋಡಿ ಕುಟುಂಬಸ್ಥರು ಯಮ ಹಿಂಸೆ ಅನುಭವಿಸ್ತಾ ಇದಾರೆ.. ನಿಜಕ್ಕೂ ಈ ದುರಂತ ಮಾತ್ರ, ಅತಿ ಭೀಕರ.. ಅತಿ ಭಯಾನಕ.. ಇದನ್ನ ನೋಡ್ತಾ ಕೂತಿರೋ ಭಾರತೀಯರ ಮನಸ್ಸಲ್ಲಿರೋದು ಒಂದೇ ಪ್ರಶ್ನೆ.. ಈ ಸುರಂಗದ ರಕ್ಕಸ ದ್ವಾರ ಯಾವಾಗ ಓಪನ್ ಆಗುತ್ತೆ ಅನ್ನೋದು. ಅವತ್ತು ನವಂಬರ್ 12.. ದೇಶವೆಲ್ಲಾ ದೀಪಾವಳಿ(Deepavali) ಸಂಭ್ರಮದಲ್ಲಿದ್ದ ದಿನ.. ಎಲ್ಲೆಲ್ಲೂ ದೀಪದ ಬೆಳಕು, ಪಟಾಕಿ ಸದ್ದು ಜಗಮಗ ಅಂತಿದ್ದ ದಿನ.. ಆದ್ರೆ ಅದೇ ದಿನ, ಸುಮಾರು 41 ಮಂದಿ ಕಾರ್ಮಿಕರು, ತಮ್ಮ ಕೆಲಸ ಮಾಡೋದಕ್ಕೆ ಅಂತ, ಉತ್ತರಖಾಂಡದ, ಉತ್ತರಕಾಶಿಯ, ಸಿಲ್ಕ್ಯಾರ ಟನಲ್ ಒಳಗೆ ಹೋಗಿದ್ರು.. ಅವತ್ತು ಹೋದೋರು, ಇವತ್ತಿನ ತನಕ ವಾಪಾಸ್ ಬರೋಕೆ ಸಾಧ್ಯವಾಗಿಲ್ಲ. ಉತ್ತರಕಾಶಿಯಲ್ಲಿ(Uttarakashi) ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿ(National high way) ನಿರ್ಮಾಣದ ಸಲುವಾಗಿ ಸುರಂಗ ಮಾರ್ಗ ನಿರ್ಮಾಣ ಮಾಡ್ತಾ ಇದ್ರು.. ಸಿಲ್ಕ್ಯಾರಾ ಮತ್ತು ದಾಂಡಲ್‌ಗಾಂವ್ ಮಧ್ಯೆ  ನಿರ್ಮಾಣ ಮಾಡ್ತಾ ಇದ್ದ ಸುಮಾರು ನಾಲ್ಕೂವರೆ ಕಿ. ಮೀ. ಉದ್ದದ ಸುರಂಗ ಮಾರ್ಗ ಇದು.  ಆದ್ರೆ, ಭಾನುವಾರ ಮುಂಜಾನೆ ಈ ಸುರಂಗ ಮಾರ್ಗದ ಒಂದು ಬದಿ ಕುಸಿದು ಬಿದ್ದಿದೆ.. ಕೆಲಸ ಮಾಡ್ತಿದ್ದ ಕಾರ್ಮಿಕರು ಒಳಗೆ ಸಿಲುಕಿದ್ದಾರೆ.

ಇದನ್ನೂ ವೀಕ್ಷಿಸಿ:  ರಿಯಲ್ ಲೈಫ್‌ನಲ್ಲಿ ಹಸೆಮಣೆ ಏರುತ್ತಿದ್ದಾರೆ ಪ್ರಥಮ್! 'ಫಸ್ಟ್ ನೈಟ್ ವಿತ್ ದೆವ್ವ'ಎಂದ ಒಳ್ಳೆ ಹುಡುಗ !

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!