UP Elections: 7ನೇ ಹಂತದ ಮತದಾನ, ಯೋಗಿ ಸಂಪುಟದ ಐವರು ಸಚಿವರಿಗೆ ಅಗ್ನಿಪರೀಕ್ಷೆ!

UP Elections: 7ನೇ ಹಂತದ ಮತದಾನ, ಯೋಗಿ ಸಂಪುಟದ ಐವರು ಸಚಿವರಿಗೆ ಅಗ್ನಿಪರೀಕ್ಷೆ!

Published : Mar 07, 2022, 09:45 AM IST

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಆರು ಹಂತಗಳ ಮತದಾನ ಮುಗಿದಿದ್ದು, ಏಳನೇ ಹಂತದ ಮತದಾನಕ್ಕೆ ಭರದ ಸಿದ್ಧತೆ ನಡೆದಿವೆ. ಅಂತಿಮ ಹಂತದ ಈ ಮತದಾನ ಮಾರ್ಚ್ 7 ರಂದು ನಡೆಯಲಿದೆ. ರಾಜ್ಯದ 9 ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಈ ಮತದಾನ ನಡೆಯಲಿದೆ. ಶನಿವಾರ ಸಂಜೆ 6 ಗಂಟೆಗೆ ಚುನಾವಣಾ ಪ್ರಚಾರ ಅಂತ್ಯಗೊಂಡಿದ್ದು,  ಎಲ್ಲಾ ರಾಜಕೀಯ ಪಕ್ಷಗಳು ಶಕ್ತಿಮೀರಿ ಪ್ರಚಾರ ನಡೆಸಿವೆ. ಅಂತಿಮ ಹಂತದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಣಾಸಿ ಸೇರಿದಂತೆ ಪೂರ್ವಾಂಚಲ್‌ನ 9 ಜಿಲ್ಲೆಗಳನ್ನು ಸೇರಿಸಲಾಗಿದೆ. ಇದುವರೆಗೆ ಯುಪಿಯ 403 ಸ್ಥಾನಗಳ ಪೈಕಿ 349 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ಲಕ್ನೋ(ಮಾ.07): ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಆರು ಹಂತಗಳ ಮತದಾನ ಮುಗಿದಿದ್ದು, ಏಳನೇ ಹಂತದ ಮತದಾನಕ್ಕೆ ಭರದ ಸಿದ್ಧತೆ ನಡೆದಿವೆ. ಅಂತಿಮ ಹಂತದ ಈ ಮತದಾನ ಮಾರ್ಚ್ 7 ರಂದು ನಡೆಯಲಿದೆ. ರಾಜ್ಯದ 9 ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಈ ಮತದಾನ ನಡೆಯಲಿದೆ. ಶನಿವಾರ ಸಂಜೆ 6 ಗಂಟೆಗೆ ಚುನಾವಣಾ ಪ್ರಚಾರ ಅಂತ್ಯಗೊಂಡಿದ್ದು,  ಎಲ್ಲಾ ರಾಜಕೀಯ ಪಕ್ಷಗಳು ಶಕ್ತಿಮೀರಿ ಪ್ರಚಾರ ನಡೆಸಿವೆ. ಅಂತಿಮ ಹಂತದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಣಾಸಿ ಸೇರಿದಂತೆ ಪೂರ್ವಾಂಚಲ್‌ನ 9 ಜಿಲ್ಲೆಗಳನ್ನು ಸೇರಿಸಲಾಗಿದೆ. ಇದುವರೆಗೆ ಯುಪಿಯ 403 ಸ್ಥಾನಗಳ ಪೈಕಿ 349 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ಏಳನೇ ಹಂತದಲ್ಲಿ ಹಲವು ರಾಜಕೀಯ ದಿಗ್ಗಜರು ಸೇರಿದಂತೆ ಯೋಗಿ ಸರ್ಕಾರದ ಆರು ಸಚಿವರು ಅಗ್ನಿಪರೀಕ್ಷೆ ಎದುರಿಸಲಿದ್ದಾರೆ. ಈ ಪೈಕಿ ಐವರು ಹಾಲಿ ಸಚಿವರು. ಮಾರ್ಚ್ 7 ರಂದು ಅಜಂಗಢ, ಮೌ, ಜೌನ್‌ಪುರ್, ಘಾಜಿಪುರ, ಚಂದೌಲಿ, ವಾರಣಾಸಿ, ಮಿರ್ಜಾಪುರ, ಸೋನ್‌ಭದ್ರ ಮತ್ತು ಭದೋಹಿ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಈ ಜಿಲ್ಲೆಗಳ 54 ಸ್ಥಾನಗಳಲ್ಲಿ ಒಟ್ಟು 613 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2.06 ಕೋಟಿ ಮತದಾರರು ತಮ್ಮ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. 2017 ರ ವಿಧಾನಸಭಾ ಚುನಾವಣೆಯಲ್ಲಿ, ಈ 54 ಸ್ಥಾನಗಳಲ್ಲಿ, ಬಿಜೆಪಿ 29, ಎಸ್‌ಪಿ 11, ಬಿಎಸ್‌ಪಿ 6, ಅಪ್ನಾ ದಳ (ಎಸ್) 4, ಎಸ್‌ಪಿ 3 ಮತ್ತು ನಿಶಾದ್ ಪಕ್ಷ 1 ಸ್ಥಾನವನ್ನು ಗೆದ್ದಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more