News Hour: ವಿಪಕ್ಷಗಳ ಘಟಬಂದನ್‌ ಐಎನ್‌ಡಿಐಎ ಮೈತ್ರಿಗೆ ಆಮ್‌ ಆದ್ಮಿಗೆ ಇಲ್ಲ ಎಂಟ್ರಿ!

News Hour: ವಿಪಕ್ಷಗಳ ಘಟಬಂದನ್‌ ಐಎನ್‌ಡಿಐಎ ಮೈತ್ರಿಗೆ ಆಮ್‌ ಆದ್ಮಿಗೆ ಇಲ್ಲ ಎಂಟ್ರಿ!

Published : Aug 16, 2023, 11:19 PM IST

ಪ್ರಧಾನಿ ನರೇಂದ್ರ ಮೋದಿಯನ್ನು ಎದುರಿಸುವ ಸಲುವಾಗಿ ವಿಪಕ್ಷಗಳು ಮಾಡಿಕೊಂಡ ಘಟಬಂದನ್ ಐಎನ್‌ಡಿಐಎ ಮೈತ್ರಿಕೂಟಕ್ಕೆ ಆರಂಭದಲ್ಲಿಯೇ ಹಿನ್ನಡೆಯಾಗಿದೆ. ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್ ಆದ್ಮಿ ಪಾರ್ಟಿ ಮೈತ್ರಿಯಿಂದ ಹೊರಹೋಗುವ ಸಾಧ್ಯತೆ ಇದೆ.

ನವದೆಹಲಿ (ಆ.16): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಎಪಿ ಜತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌ನಲ್ಲಿಯೇ ಅಪಸ್ವರ ಎದುರಾಗಿದೆ. ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್‌ ಘೋಷಣೆ ಮಾಡಿದ ಬೆನ್ನಲ್ಲಿಯೇ, ಐಎನ್‌ಡಿಐಎ ಮೈತ್ರಿಕೂಟದಲ್ಲಿ ಇರುವುದು ಸಮಯ ವ್ಯರ್ಥ ಮಾಡಿದಂತೆ ಎಂದು ಆಪ್‌ ಹೇಳಿದೆ.

ಅದರೊಂದಿಗೆ ‘ಇಂಡಿಯಾ’ ಮೈತ್ರಿಕೂಟಕ್ಕೆ ದೆಹಲಿಯಲ್ಲೇ ಭಾರಿ ಹಿನ್ನಡೆ ಎದುರಾಗಿದೆ. ದೆಹಲಿ ಕಾಂಗ್ರೆಸ್ ನಾಯಕರ ಜತೆ ಆಪ್‌ ಜೊತೆ ಮೈತ್ರಿ ವಿಚಾರವಾಗಿ ಖರ್ಗೆ ಹಾಗೂ ರಾಹುಲ್‌ ಸಭೆ ನಡೆಸಿದ್ದಾರೆ. ಮೊದಲ ಸಭೆಯಲ್ಲಿ ಆಪ್ ಜತೆ ಮೈತ್ರಿ ಬಗ್ಗೆ ಒಮ್ಮತ ಮೂಡಿಲ್ಲ. ದೆಹಲಿಯ 7 ಕ್ಷೇತ್ರಗಳ ಹಂಚಿಕೆಯಲ್ಲೇ ಭಾರೀ ಭಿನ್ನಮತ ಎದುರಾಗಿದೆ.

ಎಎಪಿಗೆ ಕ್ಷೇತ್ರ ಬಿಟ್ಟುಕೊಡೋ ವಿಚಾರದಲ್ಲಿ ಭಿನ್ನಾಭಿಪ್ರಾಯ ಎದುರಾಗಿದೆ. ಎಎಪಿ ಜತೆ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕದ ದೊಡ್ಡ ವಿರೋಧ ವ್ಯಕ್ತವಾಗಿದೆ.ಈ ನಡುವೆ ದಿಲ್ಲಿ 7 ಕ್ಷೇತ್ರಗಳಲ್ಲೂ ಸ್ಪರ್ಧೆಗೆ ಸಿದ್ಧತೆ ನಡೆಸಿ ಎಂದು ಖರ್ಗೆ ಸೂಚಿಸಿದ್ದಾರೆ. ಇದರ ಬೆನ್ನಲ್ಲಿಯೇ ಮುಂಬೈನಲ್ಲಿ ನಡೆಯುವ ಸಭೆಗೆ ಬಹಿಷ್ಕರಿಸಲು ಆಪ್ ಚಿಂತನೆ ನಡೆಸಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more