News Hour: ವಿಪಕ್ಷಗಳ ಘಟಬಂದನ್‌ ಐಎನ್‌ಡಿಐಎ ಮೈತ್ರಿಗೆ ಆಮ್‌ ಆದ್ಮಿಗೆ ಇಲ್ಲ ಎಂಟ್ರಿ!

News Hour: ವಿಪಕ್ಷಗಳ ಘಟಬಂದನ್‌ ಐಎನ್‌ಡಿಐಎ ಮೈತ್ರಿಗೆ ಆಮ್‌ ಆದ್ಮಿಗೆ ಇಲ್ಲ ಎಂಟ್ರಿ!

Published : Aug 16, 2023, 11:19 PM IST

ಪ್ರಧಾನಿ ನರೇಂದ್ರ ಮೋದಿಯನ್ನು ಎದುರಿಸುವ ಸಲುವಾಗಿ ವಿಪಕ್ಷಗಳು ಮಾಡಿಕೊಂಡ ಘಟಬಂದನ್ ಐಎನ್‌ಡಿಐಎ ಮೈತ್ರಿಕೂಟಕ್ಕೆ ಆರಂಭದಲ್ಲಿಯೇ ಹಿನ್ನಡೆಯಾಗಿದೆ. ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್ ಆದ್ಮಿ ಪಾರ್ಟಿ ಮೈತ್ರಿಯಿಂದ ಹೊರಹೋಗುವ ಸಾಧ್ಯತೆ ಇದೆ.

ನವದೆಹಲಿ (ಆ.16): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಎಪಿ ಜತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌ನಲ್ಲಿಯೇ ಅಪಸ್ವರ ಎದುರಾಗಿದೆ. ದೆಹಲಿಯ ಎಲ್ಲಾ ಏಳು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಕಾಂಗ್ರೆಸ್‌ ಘೋಷಣೆ ಮಾಡಿದ ಬೆನ್ನಲ್ಲಿಯೇ, ಐಎನ್‌ಡಿಐಎ ಮೈತ್ರಿಕೂಟದಲ್ಲಿ ಇರುವುದು ಸಮಯ ವ್ಯರ್ಥ ಮಾಡಿದಂತೆ ಎಂದು ಆಪ್‌ ಹೇಳಿದೆ.

ಅದರೊಂದಿಗೆ ‘ಇಂಡಿಯಾ’ ಮೈತ್ರಿಕೂಟಕ್ಕೆ ದೆಹಲಿಯಲ್ಲೇ ಭಾರಿ ಹಿನ್ನಡೆ ಎದುರಾಗಿದೆ. ದೆಹಲಿ ಕಾಂಗ್ರೆಸ್ ನಾಯಕರ ಜತೆ ಆಪ್‌ ಜೊತೆ ಮೈತ್ರಿ ವಿಚಾರವಾಗಿ ಖರ್ಗೆ ಹಾಗೂ ರಾಹುಲ್‌ ಸಭೆ ನಡೆಸಿದ್ದಾರೆ. ಮೊದಲ ಸಭೆಯಲ್ಲಿ ಆಪ್ ಜತೆ ಮೈತ್ರಿ ಬಗ್ಗೆ ಒಮ್ಮತ ಮೂಡಿಲ್ಲ. ದೆಹಲಿಯ 7 ಕ್ಷೇತ್ರಗಳ ಹಂಚಿಕೆಯಲ್ಲೇ ಭಾರೀ ಭಿನ್ನಮತ ಎದುರಾಗಿದೆ.

ಎಎಪಿಗೆ ಕ್ಷೇತ್ರ ಬಿಟ್ಟುಕೊಡೋ ವಿಚಾರದಲ್ಲಿ ಭಿನ್ನಾಭಿಪ್ರಾಯ ಎದುರಾಗಿದೆ. ಎಎಪಿ ಜತೆ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕದ ದೊಡ್ಡ ವಿರೋಧ ವ್ಯಕ್ತವಾಗಿದೆ.ಈ ನಡುವೆ ದಿಲ್ಲಿ 7 ಕ್ಷೇತ್ರಗಳಲ್ಲೂ ಸ್ಪರ್ಧೆಗೆ ಸಿದ್ಧತೆ ನಡೆಸಿ ಎಂದು ಖರ್ಗೆ ಸೂಚಿಸಿದ್ದಾರೆ. ಇದರ ಬೆನ್ನಲ್ಲಿಯೇ ಮುಂಬೈನಲ್ಲಿ ನಡೆಯುವ ಸಭೆಗೆ ಬಹಿಷ್ಕರಿಸಲು ಆಪ್ ಚಿಂತನೆ ನಡೆಸಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more