ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..?  'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..? 'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

Published : Dec 12, 2023, 10:26 AM IST

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದ ಸುಪ್ರೀಂಕೋರ್ಟ್
ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು 'ಸುಪ್ರೀಂ'
ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶ ಎತ್ತಿಹಿಡಿದ ಕೋರ್ಟ್‌

ಸಂವಿಧಾನದ ವಿಧಿ 370 ರದ್ದು ನಿರ್ಧಾರ ಸರಿ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರಕ್ಕಿದ್ದ(Jammu and Kashmir) ವಿಶೇಷ ಸ್ಥಾನಮಾನ ರದ್ದು ನಿರ್ಧಾರವನ್ನೂ ಸುಪ್ರೀಂಕೋರ್ಟ್‌ ಎತ್ತಿ ಹಿಡಿದಿದೆ. ಜಮ್ಮು ಕಾಶ್ಮೀರ ಭಾರತದ(India) ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್(Suprecourt) ಹೇಳಿದೆ. ಮೋದಿ ಸರ್ಕಾರದ ಆಗಸ್ಟ್ 5, 2019ರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ಸರ್ವಸಮ್ಮತ ತೀರ್ಪು ಬಂದಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಪ್ರತ್ಯೇಕಿಸಿದ್ದನ್ನೂ ಈ ವೇಳೆ ಕೋರ್ಟ್ ಎತ್ತಿಹಿಡಿದಿದೆ. ಆರ್ಟಿಕಲ್ 370 ರದ್ದು(Abrogation of Article) ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಭಾರತದ ಸಾರ್ವಭೌಮತ್ವ ಒಪ್ಪಿದ ಮೇಲೆ ಪ್ರತ್ಯೇಕ ಸಾರ್ವಭೌಮತ್ವ ಸಾಧ್ಯವಿಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜಮ್ಮು ಕಾಶ್ಮೀರ ವಿಭಜಿಸಿ ಲಡಾಕ್ ಕೇಂದ್ರಾಡಳಿತ ಪ್ರದೇಶವನ್ನಾಗಿಸಿದ್ದು ಸರಿ. ಶೀಘ್ರದಲ್ಲೇ ಜಮ್ಮು ಕಾಶ್ಮೀರಕ್ಕಿದ್ದ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಿ. 2024ರ ಸೆಪ್ಟಂಬರ್ ಒಳಗೆ ಜಮ್ಮು ಕಾಶ್ಮೀರಕ್ಕೆ ಚುನಾವಣೆ ನಡೆಸಿ ಎಂದು ಕೋರ್ಟ್‌ ಹೇಳಿದೆ.  

ಇದನ್ನೂ ವೀಕ್ಷಿಸಿ:  ಕರಾವಳಿಯಲ್ಲಿ ಜನ್ನ ಕಂಬಳ ವೈಭವ: ಬಂಟ ಸಮುದಾಯದ ದೊಡ್ಡಮನೆಯಲ್ಲಿ ಸಂಭ್ರಮ

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?