ಸಂಸದ ಪ್ರತಾಪ್ ಸಿಂಹ ಎಡವಿದ್ದೆಲ್ಲಿ..? ಟಾರ್ಗೆಟ್ ಆಗಿದ್ದೇಕೆ..?

ಸಂಸದ ಪ್ರತಾಪ್ ಸಿಂಹ ಎಡವಿದ್ದೆಲ್ಲಿ..? ಟಾರ್ಗೆಟ್ ಆಗಿದ್ದೇಕೆ..?

Published : Dec 15, 2023, 03:46 PM IST

ಬಿಜೆಪಿಯ ಫೈರ್ ಬ್ರ್ಯಾಂಡ್ ಮೇಲೆ ಕಾಂಗ್ರೆಸ್ ಸರ್ಜಿಕಲ್ ಸ್ಟ್ರೈಕ್..!
ಸಂಸತ್ ಭವನದ ಭದ್ರತಾ ಲೋಪಕ್ಕೆ ಪ್ರತಾಪ್ ಸಿಂಹ ಟಾರ್ಗೆಟ್..!
ಅಪರಿಚಿತರಿಗೆ ಸಂಸತ್ ಪಾಸ್ ಕೊಟ್ಟು ಕೆಟ್ಟರಾ ಬಿಜೆಪಿ ಸಂಸದ..?

ಆ ಐದು ನಿಮಿಷ ಲೋಕಸಭೆ(Loksabhe) ನಿಜಕ್ಕೂ ಥಂಡಾ ಹೊಡೆದು ಹೋಗಿತ್ತು. ಬುಧವಾರ ಲೋಕಸಭೆಯ ಒಳಗೆ ನಡೆದ ಘಟನೆ, ಆ ಘಟನೆಯ ಹಿಂದಿನ ಪಿತೂರಿ, ಆ ಪಿತೂರಿಯಲ್ಲಿ ಭಾಗಿಯಾದವರು, ಅವರ ಉದ್ದೇಶ. ಹೀಗೆ ಎಲ್ಲವೂ ನಿಗೂಢ. ಮೈಸೂರಿನ(Mysore)ಮನೋರಂಜನ್, ಲಕ್ನೋದ ಸಾಗರ್ ಶರ್ಮಾ, ಹರ್ಯಾಣದ ನೀಲಮ್ ಕೌರ್ ಮತ್ತು ಮಹಾರಾಷ್ಟ್ರದ ಅನ್ಮೋಲ್ ಶಿಂಧೆ. ಈ ನಾಲ್ಕು ಮಂದಿ ಹೆಣೆದ ಸಂಚು ಸಂಸತ್‌ನ(parliment) ಭದ್ರತಾ ವ್ಯವಸ್ಥೆಯ ಬಗ್ಗೆ ನಾನಾ ಪ್ರಶ್ನೆಗಳು ಹುಟ್ಟುವಂತೆ ಮಾಡಿದೆ. ಇವೆಲ್ಲದರ ಜೊತೆಗೆ ಪ್ರಕರಣದಲ್ಲಿ ದೊಡ್ಡದಾಗಿ ಸದ್ದು ಮಾಡ್ತಿರೋದು, ಸೆಂಟರ್ ಆಫ್ ಟಾರ್ಗೆಟ್ ಆಗ್ತಿರೋದು ಅದೊಂದು ಹೆಸರು. ಅವರೇ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ(Pratap Simha). ಸಂಸತ್ ಭವನಕ್ಕೆ ಇಬ್ಬರು ನುಗ್ಗಿ ಆತಂಕ ಸೃಷ್ಠಿಸಿದ ಬೆನ್ನಲ್ಲೇ, ಹಳ್ಳಿಯಿಂದ ದಿಲ್ಲಿಯವರೆಗೆ ಪ್ರತಾಪ್ ಸಿಂಹ ಅವರ ಬಗ್ಗೆ ಚರ್ಚೆಯಾಗ್ತಿದೆ. ಕಾರಣ ಆ ಆಗಂತುಕರಿಗೆ, ಅಪರಿಚಿತರಿಗೆ ಲೋಕಸಭೆಗೆ ಎಂಟ್ರಿಯಾಗಲು ವಿಸಿಟರ್ ಪಾಸ್ ಕೊಟ್ಟವರೇ ಬಿಜೆಪಿ(BJP) ಸಂಸದ ಪ್ರತಾಪ್ ಸಿಂಹ. ಆ ಪಾಸ್ ಸಿಗದೇ ಇದ್ದಿದ್ದರೆ, ಪ್ರತಾಪ್ ಸಿಂಹ ಕಚೇರಿಯಿಂದ ಆ ಪಾಸ್‌ಗಳನ್ನು ಕೊಡದೇ ಇದ್ದಿದ್ದರೆ ಲೋಕಸಭೆಯೊಳಗೆ ಅಂಥಾ ಒಂದು ಅನಾಹುತ ನಡೀತಾನೇ ಇರ್ಲಿಲ್ಲ. ಇದನ್ನು ನಾವ್ ಹೇಳ್ತಿಲ್ಲ, ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಹೇಳ್ತಾ ಇದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಸಂದರ್ಭಗಳಲ್ಲಿ ಬೇರೆಯವರ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡುವ ಪ್ರತಾಪ್ ಸಿಂಹ, ಈಗ ಯಾಕೆ ಮೌನವಾಗಿದ್ದಾರೆ ಅಂತ ಕೈ ನಾಯಕರು ಪ್ರಶ್ನಿಸ್ತಾ ಇದ್ದಾರೆ.

ಇದನ್ನೂ ವೀಕ್ಷಿಸಿ:  ಸಂಸತ್ ಸಂಚಿನ ರಹಸ್ಯವೇನು ಗೊತ್ತಾ..? ಯಾರು ಈ ಆಗಂತುಕರು? ಏನಿವರ ಅಸಲಿ ಕತೆ!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more