ಕಳಚಿದ ನೋಸ್‌ ವೀಲ್‌, ಏರ್‌ ಆಂಬುಲೆನ್ಸ್‌ ತುರ್ತು ಭೂಸ್ಪರ್ಶ!

ಕಳಚಿದ ನೋಸ್‌ ವೀಲ್‌, ಏರ್‌ ಆಂಬುಲೆನ್ಸ್‌ ತುರ್ತು ಭೂಸ್ಪರ್ಶ!

Published : May 08, 2021, 02:21 PM ISTUpdated : May 08, 2021, 02:29 PM IST

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ನೋಸ್‌ ವೀಲ್‌ ಕಳಚಿದ ಹಿನ್ನೆಲೆಯಲ್ಲಿ ಏರ್‌ ಆಂಬುಲೆನ್ಸ್‌ವೊಂದು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿತು. ಚಕ್ರ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ.

ಮುಂಬೈ(ಮೇ.08): ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ನೋಸ್‌ ವೀಲ್‌ ಕಳಚಿದ ಹಿನ್ನೆಲೆಯಲ್ಲಿ ಏರ್‌ ಆಂಬುಲೆನ್ಸ್‌ವೊಂದು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿತು. ಚಕ್ರ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ.

ಭಾರತದಲ್ಲಿ ಆಕ್ಸಿಜನ್ ಎಮರ್ಜೆನ್ಸಿ: ಪ್ರತಿದಿನ ಬೇಕು 8400 ಮೆಟ್ರಿಕ್ ಟನ್ ಆಕ್ಸಿಜನ್

 ರಕ್ಷಣಾ ತಂಡಗಳು, ವೈದ್ಯರು, ಸಿಐಎಸ್‌ಎಫ್‌ ಸಿಬ್ಬಂದಿ ಸೇರಿದಂತೆ ಭಾರಿ ಮುನ್ನೆಚ್ಚರಿಕೆಯ ಸಿದ್ಧತೆಯೊಂದಿಗೆ ಏರ್‌ ಆಂಬುಲೆನ್ಸ್‌ ಅನ್ನು ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೆಟ್‌ ಸರ್ವ್‌ ಕಂಪನಿಗೆ ಸೇರಿದ ಈ ಏರ್ ಆಂಬುಲೆನ್ಸ್‌ ನಾಗಪುರದಿಂದ ಹೈದರಾಬಾದ್‌ಗೆ ಹೊರಟಿತ್ತು. ಇದರಲ್ಲಿ ಇಬ್ಬರು ಸಿಬ್ಬಂದಿ, ವೈದ್ಯ, ಪ್ಯಾರಾಮೆಡಿಕಲ್‌ ಸಿಬ್ಬಂದಿ ಹಾಗೂ ಒಬ್ಬ ರೋಗಿ ಇದ್ದರು.

ಲ್ಯಾಂಡ್ ಆದ ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತರಾಗಿದ್ದು ಅವರನ್ನು ಸ್ಥಳಾಂತರಿಸಲಾಗಿದೆ. ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್