ಕಳಚಿದ ನೋಸ್‌ ವೀಲ್‌, ಏರ್‌ ಆಂಬುಲೆನ್ಸ್‌ ತುರ್ತು ಭೂಸ್ಪರ್ಶ!

ಕಳಚಿದ ನೋಸ್‌ ವೀಲ್‌, ಏರ್‌ ಆಂಬುಲೆನ್ಸ್‌ ತುರ್ತು ಭೂಸ್ಪರ್ಶ!

Published : May 08, 2021, 02:21 PM ISTUpdated : May 08, 2021, 02:29 PM IST

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ನೋಸ್‌ ವೀಲ್‌ ಕಳಚಿದ ಹಿನ್ನೆಲೆಯಲ್ಲಿ ಏರ್‌ ಆಂಬುಲೆನ್ಸ್‌ವೊಂದು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿತು. ಚಕ್ರ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ.

ಮುಂಬೈ(ಮೇ.08): ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ನೋಸ್‌ ವೀಲ್‌ ಕಳಚಿದ ಹಿನ್ನೆಲೆಯಲ್ಲಿ ಏರ್‌ ಆಂಬುಲೆನ್ಸ್‌ವೊಂದು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿತು. ಚಕ್ರ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ.

ಭಾರತದಲ್ಲಿ ಆಕ್ಸಿಜನ್ ಎಮರ್ಜೆನ್ಸಿ: ಪ್ರತಿದಿನ ಬೇಕು 8400 ಮೆಟ್ರಿಕ್ ಟನ್ ಆಕ್ಸಿಜನ್

 ರಕ್ಷಣಾ ತಂಡಗಳು, ವೈದ್ಯರು, ಸಿಐಎಸ್‌ಎಫ್‌ ಸಿಬ್ಬಂದಿ ಸೇರಿದಂತೆ ಭಾರಿ ಮುನ್ನೆಚ್ಚರಿಕೆಯ ಸಿದ್ಧತೆಯೊಂದಿಗೆ ಏರ್‌ ಆಂಬುಲೆನ್ಸ್‌ ಅನ್ನು ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೆಟ್‌ ಸರ್ವ್‌ ಕಂಪನಿಗೆ ಸೇರಿದ ಈ ಏರ್ ಆಂಬುಲೆನ್ಸ್‌ ನಾಗಪುರದಿಂದ ಹೈದರಾಬಾದ್‌ಗೆ ಹೊರಟಿತ್ತು. ಇದರಲ್ಲಿ ಇಬ್ಬರು ಸಿಬ್ಬಂದಿ, ವೈದ್ಯ, ಪ್ಯಾರಾಮೆಡಿಕಲ್‌ ಸಿಬ್ಬಂದಿ ಹಾಗೂ ಒಬ್ಬ ರೋಗಿ ಇದ್ದರು.

ಲ್ಯಾಂಡ್ ಆದ ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತರಾಗಿದ್ದು ಅವರನ್ನು ಸ್ಥಳಾಂತರಿಸಲಾಗಿದೆ. ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?