ವಿಷಬಾಂಬ್ ಬ್ಲಾಸ್ಟ್ ಹಿಂದಿದೆಯಾ ದೆಹಲಿ ರೈತರ ಪಾಲು..? ಬೆಂಗಳೂರಿನಲ್ಲೂ ಏರ್ ಪಾಯ್ಸನ್ ಬಾಂಬ್ ಬ್ಲಾಸ್ಟ್..!

ವಿಷಬಾಂಬ್ ಬ್ಲಾಸ್ಟ್ ಹಿಂದಿದೆಯಾ ದೆಹಲಿ ರೈತರ ಪಾಲು..? ಬೆಂಗಳೂರಿನಲ್ಲೂ ಏರ್ ಪಾಯ್ಸನ್ ಬಾಂಬ್ ಬ್ಲಾಸ್ಟ್..!

Published : Nov 06, 2023, 09:17 AM IST

ದಿನದಿಂದ ದಿನಕ್ಕೆ ಗಬ್ಬೆದ್ದು ಹೋಗ್ತಿದೆ ದೆಹಲಿ ವಾತಾವರಣ..!
ತಾಯಿ ಹೊಟ್ಟೆಯಲ್ಲಿರೋ ಮಗುವಿಗೂ ತಪ್ಪಿದ್ದಲ್ಲ ಅಪಾಯ..!
ಪಾಯ್ಸನ್ ಗ್ಯಾಸ್ ಚೇಂಬರ್ ಆಗ್ಹೋಗಿರುವ ರಾಷ್ಟ್ರ ರಾಜಧಾನಿ..! 

ದೆಹಲಿ.. ಭಾರತದ(India) ರಾಜಧಾನಿ ಮಾತ್ರವಲ್ಲ, ಈ ಪ್ರದೇಶ ಅನೇಕ ಪ್ರಾಚೀನ ಸ್ಮಾರಕಗಳ ನೆಲೆಯಾಗಿದೆ ಕೂಡ. ಅವುಗಳಲ್ಲಿ ಕೋಟೆಗಳು, ಮಸೀದಿಗಳು, ದೇವಾಲಯಗಳು ಮುಂತಾದವು ಸೇರಿವೆ. ಈ ಅದ್ಭುತ ಸ್ಮಾರಕಗಳು ಸುಂದರ ಹಾಗೂ ಬೆರಗುಗೊಳಿಸುವಂತಿದೆ ಅನ್ನುವುದರಲ್ಲಿ ಎರಡು ಮಾತೇ ಇಲ್ಲ. ದೆಹಲಿಯಲ್ಲಿ(Delhi) ನೋಡಬೇಕಾದದ್ದು ತುಂಬಾ ಇದೆ. ಕಣ್ತುಂಬಿಕೊಳ್ಳಬೇಕಾದದ್ದು ಸಾಕಷ್ಟಿದೆ. ಆಕರ್ಷಕವಾದ ಮನಮೋಹಕವಾದ ಪ್ರದೇಶ ದೆಹಲಿ.  ಐತಿಹಾಸಿಕ ಮಹತ್ವದ ಜೊತೆಗೆ ರಾಜಕೀಯ ಮಹತ್ವವನ್ನೂ ಒಗ್ಗೂಡಿಸಿಕೊಂಡಿರೋ ಅತ್ಯದ್ಭುತ ತಾಣ ಈ ದೆಹಲಿ. ಇದೇ ಕಾರಣಕ್ಕೆ, ಬಹುತೇಕರು ದೆಹಲಿಯಲ್ಲೇ ಇರೋದಕ್ಕೆ ಇಷ್ಟ ಪಡ್ತಾರೆ. ದೇಶ ವಿದೇಶಗಳ ಜನರನ್ನ, ಕೈ ಬೀಸಿ ಕರೆಯುತ್ತಿದೆ ದೆಹಲಿ. ಜನ ಸಮೂಹ ಹೆಚ್ಚಾದಂತೆ, ಬೃಹದಾಕಾರವಾಗಿ ಬೆಳೀತಾ ಇದೆ ರಾಷ್ಟ್ರ ರಾಜಧಾನಿ. ಕೆಲವೇ ಕೆಲವು ವರುಷಗಳ ಹಿಂದೆ, ಈ ಪ್ರವಾಸಿ ತಾಣಗಳನ್ನ ನೋಡಲು ದೂರದೂರಿನಿಂದ ಪ್ರವಾಸಿಗರು ಲಕ್ಷಾಂತರ ಸಂಖ್ಯೆಯಲ್ಲಿ ದೆಹಲಿಗೆ ಬರುತ್ತಿದ್ದರು. ಆದರೆ ಈಗ ಇದೇ ದೆಹಲಿಗೆ ಬರೋದಕ್ಕೆ ಜನ ಹಿಂದೇಟು ಹಾಕ್ತಿದ್ದಾರೆ. ಕಾರಣ ಈಗ ದೆಹಲಿಗೆ ಬಂದರೆ ಸಾವೇ ಫಿಕ್ಸ್ ಅನ್ನೊ ಭಯ ಅವರಿಗೆಲ್ಲ ಕಾಡ್ತಿದೆ. ದೆಹಲಿ ಈಗ ಸಾವಿನ ಕೂಪ ಅನ್ನೊ ಭಾವ ಎಲ್ಲರಿಗೂ ಕಾಡ್ತಿದೆ. ಇದೇ ಕಾರಣಕ್ಕೆ ಈಗ ದೆಹಲಿಗೆ ಬರೋ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಕಡಿಮೆ ಆಗ್ತಿದೆ. ಅಷ್ಟೆ ಅಲ್ಲ ಈಗ ದೆಹಲಿಗೆ ಬಂದು ನಿರಾಳವಾಗಿ ಉಸಿರಾಡ್ತೇನೆ ಅಂದರೂ ಕೂಡ ಸಾವು ತಪ್ಪಿದ್ದಲ್ಲ. ಈ ಪ್ರದೇಶ ಅಷ್ಟು ಭಯಾನಕ ಪ್ರದೇಶವಾಗಿ ಬದಲಾಗ್ಹೋಗಿದೆ..  ಅಷ್ಟಕ್ಕೂ ಇಲ್ಲಿ ಅಂಥಹದ್ದು ಏನಾಗ್ತಿದೆ ಅಂತಿರಾ.. ಅಲ್ಲಿ ಪ್ರತಿವರ್ಷ ಛಳಿಗಾಲ ಬಂದರೆ ಸಾಕು ವಿಷಗಾಳಿ(Air pollution) ಬಾಂಬ್ ಬ್ಲಾಸ್ಟ್ ಆಗೋದು ಫಿಕ್ಸ್. ಆ ಬಾಂಬ್ಗೆ ನೂರಾರು ಜನ ಬಲಿ ಆಗ್ಹೋದ್ರೆ. ಇನ್ನೂ ಅನೇಕರಿಗೆ ನರಳಾಡೋ ಕಾಯಿಲೆಯನ್ನ ಅಂಟಿಸಿಬಿಟ್ಟು ಹೋಗಿರುತ್ತೆ.

ಇದನ್ನೂ ವೀಕ್ಷಿಸಿ:  ವಿಶಿಷ್ಟ ಸೇವೆ ಮಾಡಿದ 16 ಜನರಿಗೆ ಅಸಮಾನ್ಯ ಕನ್ನಡಿಗ ಅವಾರ್ಡ್: ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more