Panama Papers Leak: ಐಶ್‌ಗೆ ಇ.ಡಿ ಟೆನ್ಷನ್, ಸಂಸತ್‌ನಲ್ಲಿ ಬಿಜೆಪಿಗರಿಗೆ ಹಿಡಿಶಾಪ ಹಾಕಿದ ಅತ್ತೆ!

Panama Papers Leak: ಐಶ್‌ಗೆ ಇ.ಡಿ ಟೆನ್ಷನ್, ಸಂಸತ್‌ನಲ್ಲಿ ಬಿಜೆಪಿಗರಿಗೆ ಹಿಡಿಶಾಪ ಹಾಕಿದ ಅತ್ತೆ!

Published : Dec 22, 2021, 05:18 PM IST

 2016ರಲ್ಲಿ ಬೆಳಕಿಗೆ ಬಂದಿದ್ದ ಪನಾಮಾ ಪೇಪ​ರ್ಸ್ (Panama Papers) ತೆರಿಗೆ ವಂಚನೆ ಹಗರಣ ಸಂಬಂಧ, ನಟಿ ಐಶ್ವರ್ಯಾ ರೈ (Aishwarya Rai)  ಜಾರಿ ನಿರ್ದೇಶನಾಲಯದ (ED) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

ಬೆಂಗಳೂರು (ಡಿ. 22): 2016ರಲ್ಲಿ ಬೆಳಕಿಗೆ ಬಂದಿದ್ದ ಪನಾಮಾ ಪೇಪ​ರ್ಸ್ (Panama Papers) ತೆರಿಗೆ ವಂಚನೆ ಹಗರಣ ಸಂಬಂಧ, ನಟಿ ಐಶ್ವರ್ಯಾ ರೈ (Aishwarya Rai)  ಜಾರಿ ನಿರ್ದೇಶನಾಲಯದ (ED) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅಧಿಕಾರಿಗಳು, ತೆರಿಗೆ ವಂಚನೆಗೆ ನೆರವು ನೀಡುವ ದೇಶಗಳಲ್ಲಿ ಕಂಪನಿ ಆರಂಭಿಸಿದ ಬಗ್ಗೆ, ಅಲ್ಲಿನ ಹೂಡಿಕೆ, ವಿದೇಶಗಳಿಂದ ಬಂದ ಆದಾಯದ ಬಗ್ಗೆ ಪ್ರಶ್ನೆ ಮಾಡಿ, ಫೆಮಾ ಕಾಯ್ದೆಯಡಿ ನಟಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. 

ಬಿಜೆಪಿ ಸದಸ್ಯರು ವೈಯಕ್ತಿಕ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ತಾಳ್ಮೆ ಕಳೆದುಕೊಂಡ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್‌ (Jaya Bacchan) ‘ಬಿಜೆಪಿಗರ ಕೆಟ್ಟದಿನಗಳು ಶೀಘ್ರದಲ್ಲಿಯೇ ಆರಂಭವಾಗಲಿವೆ’ ಎಂದು ಹಿಡಿಶಾಪ ಹಾಕಿದರು. ಇದೇ ವೇಳೆ, ‘ಯಾರೊಬ್ಬರ ಮೇಲೂ ವೈಯಕ್ತಿಕ ಟೀಕೆ ಸಲ್ಲ. ಸಂಸತ್ತಿನಲ್ಲಿ ಏನು ನಡೆಯಿತೋ ಅದು ದುರದೃಷ್ಟಕರ. ಅವರು ಮಾತನಾಡಿದ ಬಗ್ಗೆ ಸಭಾಪತಿ ಸಹ ಪ್ರಶ್ನಿಸಲಿಲ್ಲ’ ಎಂದು ಬೇಸರ ಹೊರಹಾಕಿದರು.

ವಾಷಿಂಗ್ಟನ್‌ ಮೂಲದ ಜಾಗತಿಕ ತನಿಖಾ ಪತ್ರಕರ್ತರ ಒಕ್ಕೂಟವೂ, 2016ರಲ್ಲಿ ಪನಾಮಾ ದೇಶದ ಮೊಸ್ಸಾಕ್‌ ಫೋನ್ಸೆಕಾ ಎಂಬ ಕಾನೂನು ಸಂಸ್ಥೆಯ ದಾಖಲೆಗಳನ್ನು ಆಧರಿಸಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿತ್ತು. ಅದರಲ್ಲಿ ಹೇಗೆ ರಾಜಕಾರಣಿಗಳು, ಉದ್ಯಮಿಗಳು, ನಟರು, ಕ್ರೀಡಾಪಟುಗಳು, ಖ್ಯಾತನಾಮರು, ತೆರಿಗೆ ವಂಚನೆಗೆ ನೆರವು ನೀಡುವ ದೇಶಗಳಲ್ಲಿ ಹಣ ಹೂಡಿಕೆ ಮಾಡಿ ತಮ್ಮ ದೇಶಗಳಲ್ಲಿ ತೆರಿಗೆ ವಂಚಿಸುತ್ತಿದ್ದಾರೆ ಎಂಬ ವಿಷಯವನ್ನು ಬಹಿರಂಗ ಮಾಡಿತ್ತು.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more