Panama Papers Leak: ಐಶ್‌ಗೆ ಇ.ಡಿ ಟೆನ್ಷನ್, ಸಂಸತ್‌ನಲ್ಲಿ ಬಿಜೆಪಿಗರಿಗೆ ಹಿಡಿಶಾಪ ಹಾಕಿದ ಅತ್ತೆ!

Panama Papers Leak: ಐಶ್‌ಗೆ ಇ.ಡಿ ಟೆನ್ಷನ್, ಸಂಸತ್‌ನಲ್ಲಿ ಬಿಜೆಪಿಗರಿಗೆ ಹಿಡಿಶಾಪ ಹಾಕಿದ ಅತ್ತೆ!

Suvarna News   | Asianet News
Published : Dec 22, 2021, 05:18 PM IST

 2016ರಲ್ಲಿ ಬೆಳಕಿಗೆ ಬಂದಿದ್ದ ಪನಾಮಾ ಪೇಪ​ರ್ಸ್ (Panama Papers) ತೆರಿಗೆ ವಂಚನೆ ಹಗರಣ ಸಂಬಂಧ, ನಟಿ ಐಶ್ವರ್ಯಾ ರೈ (Aishwarya Rai)  ಜಾರಿ ನಿರ್ದೇಶನಾಲಯದ (ED) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

ಬೆಂಗಳೂರು (ಡಿ. 22): 2016ರಲ್ಲಿ ಬೆಳಕಿಗೆ ಬಂದಿದ್ದ ಪನಾಮಾ ಪೇಪ​ರ್ಸ್ (Panama Papers) ತೆರಿಗೆ ವಂಚನೆ ಹಗರಣ ಸಂಬಂಧ, ನಟಿ ಐಶ್ವರ್ಯಾ ರೈ (Aishwarya Rai)  ಜಾರಿ ನಿರ್ದೇಶನಾಲಯದ (ED) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಅಧಿಕಾರಿಗಳು, ತೆರಿಗೆ ವಂಚನೆಗೆ ನೆರವು ನೀಡುವ ದೇಶಗಳಲ್ಲಿ ಕಂಪನಿ ಆರಂಭಿಸಿದ ಬಗ್ಗೆ, ಅಲ್ಲಿನ ಹೂಡಿಕೆ, ವಿದೇಶಗಳಿಂದ ಬಂದ ಆದಾಯದ ಬಗ್ಗೆ ಪ್ರಶ್ನೆ ಮಾಡಿ, ಫೆಮಾ ಕಾಯ್ದೆಯಡಿ ನಟಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. 

ಬಿಜೆಪಿ ಸದಸ್ಯರು ವೈಯಕ್ತಿಕ ವಿಚಾರ ಪ್ರಸ್ತಾಪಿಸುತ್ತಿದ್ದಂತೆಯೇ ತಾಳ್ಮೆ ಕಳೆದುಕೊಂಡ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್‌ (Jaya Bacchan) ‘ಬಿಜೆಪಿಗರ ಕೆಟ್ಟದಿನಗಳು ಶೀಘ್ರದಲ್ಲಿಯೇ ಆರಂಭವಾಗಲಿವೆ’ ಎಂದು ಹಿಡಿಶಾಪ ಹಾಕಿದರು. ಇದೇ ವೇಳೆ, ‘ಯಾರೊಬ್ಬರ ಮೇಲೂ ವೈಯಕ್ತಿಕ ಟೀಕೆ ಸಲ್ಲ. ಸಂಸತ್ತಿನಲ್ಲಿ ಏನು ನಡೆಯಿತೋ ಅದು ದುರದೃಷ್ಟಕರ. ಅವರು ಮಾತನಾಡಿದ ಬಗ್ಗೆ ಸಭಾಪತಿ ಸಹ ಪ್ರಶ್ನಿಸಲಿಲ್ಲ’ ಎಂದು ಬೇಸರ ಹೊರಹಾಕಿದರು.

ವಾಷಿಂಗ್ಟನ್‌ ಮೂಲದ ಜಾಗತಿಕ ತನಿಖಾ ಪತ್ರಕರ್ತರ ಒಕ್ಕೂಟವೂ, 2016ರಲ್ಲಿ ಪನಾಮಾ ದೇಶದ ಮೊಸ್ಸಾಕ್‌ ಫೋನ್ಸೆಕಾ ಎಂಬ ಕಾನೂನು ಸಂಸ್ಥೆಯ ದಾಖಲೆಗಳನ್ನು ಆಧರಿಸಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿತ್ತು. ಅದರಲ್ಲಿ ಹೇಗೆ ರಾಜಕಾರಣಿಗಳು, ಉದ್ಯಮಿಗಳು, ನಟರು, ಕ್ರೀಡಾಪಟುಗಳು, ಖ್ಯಾತನಾಮರು, ತೆರಿಗೆ ವಂಚನೆಗೆ ನೆರವು ನೀಡುವ ದೇಶಗಳಲ್ಲಿ ಹಣ ಹೂಡಿಕೆ ಮಾಡಿ ತಮ್ಮ ದೇಶಗಳಲ್ಲಿ ತೆರಿಗೆ ವಂಚಿಸುತ್ತಿದ್ದಾರೆ ಎಂಬ ವಿಷಯವನ್ನು ಬಹಿರಂಗ ಮಾಡಿತ್ತು.

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more