UP Politics ಉತ್ತರ ಪ್ರದೇಶದಲ್ಲಿ ಸಂಚಲನ ಹುಟ್ಟು ಹಾಕಿದ ಅಮಿತ್ ಶಾ ಹೇಳಿಕೆ

UP Politics ಉತ್ತರ ಪ್ರದೇಶದಲ್ಲಿ ಸಂಚಲನ ಹುಟ್ಟು ಹಾಕಿದ ಅಮಿತ್ ಶಾ ಹೇಳಿಕೆ

Published : Feb 26, 2022, 07:00 PM IST

ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಹೀಗಿರುವಾಗ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು 2007 ರಂತೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಸಾಧನೆಗೆ ಮರಳಿ ಯತ್ನಿಸುತ್ತೇವೆ. ಈ ಮೂಲಕ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸರ್ಕಾರ ರಚಿಸುವ ಎಲ್ಲಾ ಕನಸುಗಳು ನುಚ್ಚು ನೂರಾಗಿಸುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ, ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು  ಅಮಿತ್ ಶಾ ಸಂದರ್ಶನವೊಂದರಲ್ಲಿ ಹೇಳಿರೋದು ಚರ್ಚೆ ಹುಟ್ಟುಹಾಕಿದೆ. ಪ್ರತಿಯಾಗಿ, ಅಮಿತ್ ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ಮಾಯಾವತಿ ಹೊಗಳಿದ್ದಾರೆ. 

ಫೆಬ್ರವರಿ 23 ರಂದು ಯುಪಿ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದೆ. ಎಲ್ಲಾ ರಾಜಕೀಯ ಪಕ್ಷಗಳು ಮುಂದಿನ ಹಂತಗಳಿಗೆ ಸಂಪೂರ್ಣವಾಗಿ ಸಿದ್ಧತೆ ನಡೆಸಿವೆ. ಹೀಗಿರುವಾಗ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ಅವರು 2007 ರಂತೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಸಾಧನೆಗೆ ಮರಳಿ ಯತ್ನಿಸುತ್ತೇವೆ. ಈ ಮೂಲಕ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸರ್ಕಾರ ರಚಿಸುವ ಎಲ್ಲಾ ಕನಸುಗಳು ನುಚ್ಚು ನೂರಾಗಿಸುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ, ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಹಾಗೂ ಬಿಎಸ್‌ಪಿಯ ಪ್ರಸ್ತುತತೆ ಹಾಗೇ ಉಳಿಯಬೇಕು ಎಂದು  ಅಮಿತ್ ಶಾ ಸಂದರ್ಶನವೊಂದರಲ್ಲಿ ಹೇಳಿರೋದು ಚರ್ಚೆ ಹುಟ್ಟುಹಾಕಿದೆ. ಪ್ರತಿಯಾಗಿ, ಅಮಿತ್ ಶಾ ಸತ್ಯ ಒಪ್ಪಿಕೊಂಡಿರುವುದು ಅವರ ದೊಡ್ಡತನ ಎಂದು ಮಾಯಾವತಿ ಹೊಗಳಿದ್ದಾರೆ. 

ಬಿಜೆಪಿ-ಬಿಎಸ್‌ಪಿಯ ಚುನಾವಣೋತ್ತರ ಮೈತ್ರಿ ಗೊಂದಲ, ಮಹತ್ವದ ಕರೆ ಕೊಟ್ಟ ಮಾಯಾವತಿ

ಮಾಯಾವತಿ ಅವರು ಮತ ಚಲಾಯಿಸಿದ ನಂತರ ಸಾಮಾಜಿಕ ಮಾಧ್ಯಮ ಟ್ವಿಟರ್ ಹ್ಯಾಂಡಲ್‌ನಿಂದ ಪತ್ರಿಕಾ ಪ್ರಕಟಣೆಯನ್ನು ಶೇರ್ ಮಾಡಿಕೊಂಡಿದ್ದಾರೆ. ಈ ನಡುವೆ ಮಾಧ್ಯಮದವರೊಂದಿಗೆ ಸಂವಾದ ಕೂಡಾ ನಡೆಸಿದ್ದಾರೆ. ಹೀಗಿರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದ್ದಾರೆ. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಾಯಾವತಿ, 'ಅಮಿತ್ ಶಾ ವಾಸ್ತವಿಕತೆಯನ್ನು ಒಪ್ಪಿಕೊಂಡಿರುವುದು ಅವರ ಉದಾರತೆ ಎಂದು ನಾನು ಭಾವಿಸುತ್ತೇನೆ. ಬಿಎಸ್ಪಿ ದಲಿತರು ಮತ್ತು ಮುಸ್ಲಿಮರಿಂದ ಮಾತ್ರವಲ್ಲದೆ ಇಡೀ ಉತ್ತರ ಪ್ರದೇಶದ ಹಿಂದುಳಿದ ವರ್ಗಗಳಿಂದಲೂ ಬೆಂಬಲ ಪಡೆಯುತ್ತಿದೆ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಮೇಲ್ಜಾತಿಯವರೂ ಇದ್ದಾರೆ. ಬಿಎಸ್ಪಿ ಇಡೀ ಸಮಾಜದ ಮತ ಪಡೆಯುತ್ತಿದೆ,ಎಂದು ಮಾಯವತಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ, 2007ರಂತೆಯೇ ಸಂಪೂರ್ಣ ಬಹುಮತದ ಆಧಾರದ ಮೇಲೆ ಖಂಡಿತವಾಗಿಯೂ ತಮ್ಮ ಸರ್ಕಾರವನ್ನು ರಚಿಸುವುದಾಗಿ ಮಾಯವತಿ ಹೇಳಿಕೊಂಡಿದ್ದಾರೆ. ಈ ಬಾರಿ ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಜಾಟ್ ಮತದಲ್ಲಿ ದಕ್ಕೆ ಮಾಡುವ ಬಗ್ಗೆ ಹೇಳಿಕೆ ನೀಡಿದ್ದು, ಜಾಟ್ ಮತಗಳನ್ನು ಪಡೆಯುವುದು ಅವರ ಕನಸಾಗಿ ಉಳಿಯುತ್ತದೆ ಎಂದು ಮಾಯಾವತಿ ಹೇಳಿದ್ದಾರೆ. ಅಖಿಲೇಶ್ ಅವರು ತಮ್ಮ ಯಾದವ್ ಬಂಧುಗಳ ಮತ ಗಳಿಸಲು ಸಾಧ್ಯವೇ ಇಲ್ಲವೇ ಎಂದು ಮೊದಲು ಯೋಚಿಸಬೇಕು. ಅಖಿಲೇಶ್‌ ಒಬ್ಬ ನಕಲಿ ಅಂಬೇಡ್ಕರ್‌ವಾದಿ ಎಂದು ಆರೋಪಿಸಿದರು. ದಲಿತ ಗುರುಗಳು ಮತ್ತು ಮಹಾಪುರುಷರ ಹೆಸರಿನ ಜಿಲ್ಲೆಗಳು ಮತ್ತು ಯೋಜನೆಗಳನ್ನು ಅವರು ಹೇಗೆ ಬದಲಾಯಿಸಿದರು ಎಂಬುದು ನಮಗೆ ನೆನಪಿದೆ ಎಂದೂ ಕಿಡಿ ಕಾರಿದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more