ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

Published : Dec 12, 2023, 10:41 AM IST

ಮೋದಿ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ
ಆರ್ಟಿಕಲ್ 370 ಅಗ್ನಿಪರೀಕ್ಷೆ ಗೆದ್ದ ಮೋದಿ ಸರ್ಕಾರ
ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ

ಲೋಕಸಭೆ ಚುನಾವಣೆ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರಕ್ಕೆ ಬ್ರಹ್ಮಾಸ್ತ್ರವೊಂದು ಸಿಕ್ಕಿದೆ. ಮೋದಿ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ. ಈ ಮೂಲಕ ಆರ್ಟಿಕಲ್‌ 370 ಅಗ್ನಿಪರೀಕ್ಷೆಯನ್ನು ಮೋದಿ ಸರ್ಕಾರ ಗೆದ್ದಿದೆ. ರಾಜ್ಯಸಭೆಯಲ್ಲಿ ಮತ್ತೆ ಪಾಕ್ ಆಕ್ರಮಿತ ಕಾಶ್ಮೀರದ(Jammu and Kashmir) ಬಗ್ಗೆ ಪ್ರತಿಧ್ವನಿಸಲಾಗಿದೆ. ಪಿಒಕೆಯನ್ನು ಯಾರೂ ನಮ್ಮಿಂದ ಕಿತ್ತುಕೊಳ್ಳಲು ಆಗಲ್ಲ. ಪಾಕ್ ಆಕ್ರಮಿತ ಕಾಶ್ಮೀರ ಇದು ಭಾರತದ ಅವಿಭಾಜ್ಯ ಅಂಗ. ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಬಿಟ್ಟುಕೊಡಲ್ಲ ಎಂದು ರಾಜ್ಯಸಭೆಯಲ್ಲಿ(Rajyasabhe) ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ. 370ನೇ ವಿಧಿ ಪರ ಇರುವವರಿಗೆ ಕೋರ್ಟ್ ಛೀಮಾರಿ ಹಾಕಿದೆ. ಇಂದಿನ ದಿನವನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು. ಕಾಂಗ್ರೆಸ್‌ನವರು ಸುಪ್ರೀಂ ತೀರ್ಪು ಒಪ್ಪುವ ಸ್ಥಿತಿಯಲಿಲ್ಲ. ಆರ್ಟಿಕಲ್ 370ನೇ ವಿಧಿ ನೆಹರು ಕಾಲದ ಮಹಾ ಪ್ರಮಾದ. ನೆಹರೂ ನಿರ್ಧಾರದಿಂದ ಪಾಕ್ ದಾಳಿ ಮಾಡುವ ಸನ್ನಿವೇಶ ಸೃಷ್ಟಿಯಾಗಿದೆ. ನೆಹರೂ ಮಾಡಿದ ತಪ್ಪಿಗೆ ಕಾಂಗ್ರೆಸ್ ಕ್ಷಮೆ ಕೇಳಬೇಕು ಎಂದು ಅಮಿತ್‌ ಶಾ ಹೇಳಿದರು. ಕಾಶ್ಮೀರಿ ಪಂಡಿತರಿಗೂ ಗೃಹ ಸಚಿವ ಅಮಿತ್ ಶಾ ಅಭಯ. ಕಾಶ್ಮೀರಿ ಪಂಡಿತರ ಬೆನ್ನಿಗೆ ಮೋದಿ ಸರ್ಕಾರ ನಿಲ್ಲುತ್ತೆ. ಕಾಶ್ಮೀರಿ ಪಂಡಿತರಿಗೆ ಎಲ್ಲಾ ಹಕ್ಕುಗಳನ್ನು ವಾಪಸ್ ನೀಡ್ತೇವೆ ಎಂದು ಹೇಳಿದರು.

ಇದನ್ನೂ ವೀಕ್ಷಿಸಿ:  ಆರ್ಟಿಕಲ್ 370 ರದ್ದು ಸುಪ್ರೀಂಕೋರ್ಟ್ ಆದೇಶ ಏನು..? 'ಜಮ್ಮು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ'

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more