Watch Video: ದೆಹಲಿ 'ಎಣ್ಣೆ' ಹಗರಣ..ಅರವಿಂದ್‌ ಕೇಜ್ರಿವಾಲ್‌ ಅರೆಸ್ಟ್‌: ಇ-ಫೈಲಿಂಗ್‌ ಮೂಲಕ ಸುಪ್ರೀಂಕೋರ್ಟ್‌ಗೆ ಅರ್ಜಿ !

Mar 22, 2024, 12:21 PM IST

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯದ(Enforcement Directorate) ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ. ಅಕ್ರಮ ಮದ್ಯ  ನೀತಿ ಹಗರಣ ಪ್ರಕರಣದಲ್ಲಿ(Delhi Liquor Policy Scam Case) ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸತತ 9 ಸಮನ್ಸ್ ಕಳುಹಿಸಿದ ಇಡಿ ತಂಡ ಗುರುವಾರ ಸಂಜೆ 10ನೇ ಸಮನ್ಸ್ ನೊಂದಿಗೆ ಕೇಜ್ರಿವಾಲ್ ಮನೆಗೆ ತಲುಪಿತ್ತು. ಸಿಎಂ ನಿವಾಸದಲ್ಲಿ ಎರಡು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಈ ವೇಳೆ ಇಡಿ ಜಂಟಿ ನಿರ್ದೇಶಕ ಕಪಿಲ್ ರಾಜ್ ಕೂಡ ಕೇಜ್ರಿವಾಲ್ ನಿವಾಸದಲ್ಲಿ ಹಾಜರಿದ್ದರು. ಕೇಜ್ರಿವಾಲ್ ಅವರ ಹೇಳಿಕೆಯನ್ನು ಪಿಎಂಎಲ್‌ಎ ಸೆಕ್ಷನ್ 50 ರ ಅಡಿಯಲ್ಲಿ ದಾಖಲಿಸಿದ ಬೆನ್ನಲ್ಲಿಯೇ  ಅವರನ್ನು ಬಂಧಿಸಲಾಯಿತು. ಸಿಎಂ ಕೇಜ್ರಿವಾಲ್ ಅಧಿಕಾರದಲ್ಲಿರುವಾಗಲೇ ಬಂಧನಕ್ಕೊಳಗಾದ ಮೊದಲ ಸಿಎಂ ಎಂಬ ಕುಖ್ಯಾತಿಗೆ ಒಳಗಾಗಿದ್ದಾರೆ.

ಇದನ್ನೂ ವೀಕ್ಷಿಸಿ:  ಮೂಲ ಬೇರು ಮರೆತಿಲ್ಲ ಅಣ್ಣಾವ್ರ ಮೊಮ್ಮಗ..!ಗಾಜನೂರಿನ ಅಣ್ಣಾವ್ರ ಮನೆಯಲ್ಲಿ ಯುವ ಸಂದರ್ಶನ..!