Punjab Election:  ಖಲಿಸ್ತಾನದ ಪ್ರಧಾನಿ ಆಗುವೆ ಎಂದಿದ್ದರಾ ಕೇಜ್ರಿವಾಲ್..?

Punjab Election: ಖಲಿಸ್ತಾನದ ಪ್ರಧಾನಿ ಆಗುವೆ ಎಂದಿದ್ದರಾ ಕೇಜ್ರಿವಾಲ್..?

Published : Feb 19, 2022, 05:11 PM IST

ಪಂಜಾಬ್‌ ಚುನಾವಣೆಯಲ್ಲಿ ಆಪ್‌ ಗೆಲ್ಲಲು ಹವಣಿಸುತ್ತಿದ್ದರೆ, ಆ ಪಕ್ಷಕ್ಕೆ ಮಾರಕ ಆಗುವ ಗಂಭೀರ ಆರೋಪವನ್ನು ಆಮ್‌ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್‌ ವಿಶ್ವಾಸ್‌ ಮಾಡಿದ್ದಾರೆ.
 

ಪಂಜಾಬ್‌ ಚುನಾವಣೆಯಲ್ಲಿ ಆಪ್‌ ಗೆಲ್ಲಲು ಹವಣಿಸುತ್ತಿದ್ದರೆ, ಆ ಪಕ್ಷಕ್ಕೆ ಮಾರಕ ಆಗುವ ಗಂಭೀರ ಆರೋಪವನ್ನು ಆಮ್‌ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್‌ ವಿಶ್ವಾಸ್‌ ಮಾಡಿದ್ದಾರೆ.

‘2017ರ ವಿಧಾನಸಭೆ ಚುನಾವಣೆ ವೇಳೆ ಉಗ್ರ ಸಂಘಟನೆಗಳು, ಖಲಿಸ್ತಾನಿ ಚಳವಳಿಯಿಂದ ಅಂತರ ಕಾಯ್ದುಕೊಳ್ಳುವಂತೆ ಕೇಜ್ರಿವಾಲ್‌ಗೆ ಸಲಹೆ ನೀಡಿದ್ದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ಜತೆಗೆ ನಾನು ಪಂಜಾಬ್‌ಗೆ ಮುಖ್ಯಮಂತ್ರಿಯಾಗುತ್ತೇನೆ ಅಥವಾ ಖಲಿಸ್ತಾನದ ಮೊದಲ ಪ್ರಧಾನ ಮಂತ್ರಿಯಾಗುತ್ತೇನೆ ಎಂದಿದ್ದರು’ ಎಂದು ಈ ಹಿಂದೆ ಕೇಜ್ರಿವಾಲ್‌ ಅವರ ಅತ್ಯಾಪ್ತರಾಗಿದ್ದ ವಿಶ್ವಾಸ್‌ ಹೇಳಿದ್ದಾರೆ.

‘ಬಿಜೆಪಿ, ಕಾಂಗ್ರೆಸ್‌ ನನ್ನ ವಿರುದ್ಧ ಗುಂಪುಕಟ್ಟಿ, ನನಗೆ ಉಗ್ರನ ಪಟ್ಟಕಟ್ಟುತ್ತಿದ್ದಾರೆ. ಇದು ಹಾಸ್ಯಾಸ್ಪದ. ಇದೇ ನಿಜವಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಇನ್ನುವರೆಗೆ ನನಗೆ ಯಾಕೆ ಬಂಧಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ. ಕೇಜ್ರಿ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ‘ಆಮ್‌ ಆದ್ಮಿ ಪಕ್ಷ ಹಾಗೂ ನಿಷೇಧಿತ ಸಿಖ್ಖರ ಭಯೋತ್ಪಾದಕ ಸಂಘಟನೆ ನಡುವಿನ ಸಂಬಂಧದ ಬಗ್ಗೆ ತನಿಖೆಗೆ ಚನ್ನಿ ಕೋರಿದ್ದಾರೆ. ಇದನ್ನು ಪರಿಶೀಲಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more