Punjab Election:  ಖಲಿಸ್ತಾನದ ಪ್ರಧಾನಿ ಆಗುವೆ ಎಂದಿದ್ದರಾ ಕೇಜ್ರಿವಾಲ್..?

Punjab Election: ಖಲಿಸ್ತಾನದ ಪ್ರಧಾನಿ ಆಗುವೆ ಎಂದಿದ್ದರಾ ಕೇಜ್ರಿವಾಲ್..?

Published : Feb 19, 2022, 05:11 PM IST

ಪಂಜಾಬ್‌ ಚುನಾವಣೆಯಲ್ಲಿ ಆಪ್‌ ಗೆಲ್ಲಲು ಹವಣಿಸುತ್ತಿದ್ದರೆ, ಆ ಪಕ್ಷಕ್ಕೆ ಮಾರಕ ಆಗುವ ಗಂಭೀರ ಆರೋಪವನ್ನು ಆಮ್‌ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್‌ ವಿಶ್ವಾಸ್‌ ಮಾಡಿದ್ದಾರೆ.
 

ಪಂಜಾಬ್‌ ಚುನಾವಣೆಯಲ್ಲಿ ಆಪ್‌ ಗೆಲ್ಲಲು ಹವಣಿಸುತ್ತಿದ್ದರೆ, ಆ ಪಕ್ಷಕ್ಕೆ ಮಾರಕ ಆಗುವ ಗಂಭೀರ ಆರೋಪವನ್ನು ಆಮ್‌ ಆದ್ಮಿ ಪಕ್ಷದ ಮಾಜಿ ಮುಖಂಡ ಕುಮಾರ್‌ ವಿಶ್ವಾಸ್‌ ಮಾಡಿದ್ದಾರೆ.

‘2017ರ ವಿಧಾನಸಭೆ ಚುನಾವಣೆ ವೇಳೆ ಉಗ್ರ ಸಂಘಟನೆಗಳು, ಖಲಿಸ್ತಾನಿ ಚಳವಳಿಯಿಂದ ಅಂತರ ಕಾಯ್ದುಕೊಳ್ಳುವಂತೆ ಕೇಜ್ರಿವಾಲ್‌ಗೆ ಸಲಹೆ ನೀಡಿದ್ದೆ. ಆದರೆ ಅವರು ನನ್ನ ಮಾತನ್ನು ಕೇಳಲಿಲ್ಲ. ಜತೆಗೆ ನಾನು ಪಂಜಾಬ್‌ಗೆ ಮುಖ್ಯಮಂತ್ರಿಯಾಗುತ್ತೇನೆ ಅಥವಾ ಖಲಿಸ್ತಾನದ ಮೊದಲ ಪ್ರಧಾನ ಮಂತ್ರಿಯಾಗುತ್ತೇನೆ ಎಂದಿದ್ದರು’ ಎಂದು ಈ ಹಿಂದೆ ಕೇಜ್ರಿವಾಲ್‌ ಅವರ ಅತ್ಯಾಪ್ತರಾಗಿದ್ದ ವಿಶ್ವಾಸ್‌ ಹೇಳಿದ್ದಾರೆ.

‘ಬಿಜೆಪಿ, ಕಾಂಗ್ರೆಸ್‌ ನನ್ನ ವಿರುದ್ಧ ಗುಂಪುಕಟ್ಟಿ, ನನಗೆ ಉಗ್ರನ ಪಟ್ಟಕಟ್ಟುತ್ತಿದ್ದಾರೆ. ಇದು ಹಾಸ್ಯಾಸ್ಪದ. ಇದೇ ನಿಜವಾಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಇನ್ನುವರೆಗೆ ನನಗೆ ಯಾಕೆ ಬಂಧಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ. ಕೇಜ್ರಿ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ‘ಆಮ್‌ ಆದ್ಮಿ ಪಕ್ಷ ಹಾಗೂ ನಿಷೇಧಿತ ಸಿಖ್ಖರ ಭಯೋತ್ಪಾದಕ ಸಂಘಟನೆ ನಡುವಿನ ಸಂಬಂಧದ ಬಗ್ಗೆ ತನಿಖೆಗೆ ಚನ್ನಿ ಕೋರಿದ್ದಾರೆ. ಇದನ್ನು ಪರಿಶೀಲಿಸಲಾಗುವುದು’ ಎಂದು ಭರವಸೆ ನೀಡಿದ್ದಾರೆ.

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more