5 ಎಕರೆ ಭೂಮಿಯ ಭಿಕ್ಷೆ ಬೇಡ: ಇದು ಒವೈಸಿ ರಿಯಾಕ್ಷನ್!

Nov 9, 2019, 3:41 PM IST

ಹೈದರಾಬಾದ್(ನ.09): ಅಯೋಧ್ಯೆ ಭೂವಿವಾದ ಕುರಿತಾದ ಸುಪ್ರೀಂಕೋರ್ಟ್ ತೀರ್ಪನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ತಿರಸ್ಕರಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಅಂತಿಮವಾದರೂ  ದೋಷರಹಿತವಲ್ಲ ಎಂದು ಅಸಾದುದ್ದೀನ್ ಒವೈಸಿ ಮಾರ್ಮಿಕವಾಗಿ ಹೇಳಿದ್ದಾರೆ.

ಸುಪ್ರೀಂಕೋರ್ಟ್ ನೀಡಿರುವ 5 ಎಕರೆ ಭೂಮಿಯ ಭಿಕ್ಷೆ ಮುಸ್ಲಿಮರಿಗೆ ಬೇಕಿಲ್ಲ ಎಂದಿರುವ ಒವೈಸಿ ಹೇಳಿದ್ದು, ನಾನು ರಸ್ತೆಗಿಳಿದು ಭಿಕ್ಷೆ ಬೇಡಿದರೆ ಈ ದೇಶದ ಮುಸ್ಲಿಮರು 5 ಎಕರೆ ಭೂಮಿ ಖರೀದಿಸುವಷ್ಟು ಹಣ ನೀಡುತ್ತಾರೆ ಎಂದು ಗುಡುಗಿದರು.

ಇಂದಿನ ತೀರ್ಪಿಗೆ ವಿರುದ್ಧವಾಗಿ ಮರುಪರಿಶೀಲನೆ ಅರ್ಜಿ ಸಲ್ಲಿಸುವ ಕುರಿತು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧರಿಸಲಿದೆ ಎಂದು ಒವೈಸಿ ಸ್ಪಷ್ಟಪಡಿಸಿದರು.

ನವೆಂಬರ್ 9ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ