ಅಂತಿಮ ಹಂತಕ್ಕೆ ಪ್ರವೇಶಿಸಿದ ಎಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್‌-ಎನ್‌ಸಿಸಿ ವಜ್ರ ಜಯಂತಿ ಯಾತ್ರೆ

ಅಂತಿಮ ಹಂತಕ್ಕೆ ಪ್ರವೇಶಿಸಿದ ಎಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್‌-ಎನ್‌ಸಿಸಿ ವಜ್ರ ಜಯಂತಿ ಯಾತ್ರೆ

Published : Aug 08, 2022, 08:19 PM IST

ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್-ಎನ್‌ಸಿಸಿ ವಜ್ರ ಜಯಂತಿ ಯಾತ್ರೆಯು ನವದೆಹಲಿಯ ರಾಜ್ ಘಾಟ್‌ನಿಂದ ಅಂತಿಮ ಹಂತವನ್ನು ಪ್ರವೇಶಿಸಿದೆ. ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ನೊಂದಿಗೆ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಲು ಹೆಮ್ಮೆಪಡುತ್ತದೆ. ಯಾತ್ರೆಯು ಕಳೆದ 75 ವರ್ಷಗಳಲ್ಲಿ ನಮ್ಮ ರಾಷ್ಟ್ರದ ಮಹತ್ತರವಾದ ಸಾಧನೆಗಳನ್ನು ಪ್ರತಿಬಿಂಬಿಸಿದ್ದು ಮಾತ್ರವಲ್ಲದೆ, ದೇಶ ಸ್ವಾತಂತ್ರ್ಯ ಪಡೆದ 100 ವರ್ಷವಾಗುವ ವೇಳೆಗೆ ನಮ್ಮ ದೇಶ ಯಾವ ಸ್ಥಾನದಲ್ಲಿರಬೇಕು ಎನ್ನುವ ಮಾರ್ಗಸೂಚಿಯನ್ನು ರೂಪಿಸಲು ಸಹಾಯ ಮಾಡಿತು.
 

ನವದೆಹಲಿ (ಆ.8): ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್-ಎನ್‌ಸಿಸಿ ವಜ್ರ ಜಯಂತಿ ಯಾತ್ರೆಯು ನ್ಯಾಷನಲ್‌ ಕೆಡೆಟ್ ಕಾರ್ಪ್ಸ್‌ನ 150 ಕೆಡೆಟ್‌ಗಳು ಒಳಗೊಂಡ ಪ್ರಯಾಣವು ರಾಷ್ಟ್ರದಾದ್ಯಂತ ಪ್ರಮುಖ ಐತಿಹಾಸಿಕ ತಾಣಗಳು, ರಕ್ಷಣಾ ಸಂಸ್ಥೆಗಳು ಮತ್ತು ಶ್ರೇಷ್ಠತೆಯ ಕೇಂದ್ರಗಳ ಮೂಲಕ ಪ್ರಯಾಣಿಸಿದ್ದು, ನವದೆಹಲಿಯಲ್ಲಿ ತನ್ನ ಅಂತಿಮ ಹಂತವನ್ನು ಪ್ರವೇಶಿಸಿತು. 

ಯುವಜನತೆಗೆ ಸಂಸ್ಕೃತಿ ಮತ್ತು ಪರಂಪರೆಯ ಸಂಪತ್ತನ್ನು ಪ್ರಸ್ತುತಪಡಿಸುವ ಗುರಿಯನ್ನು ಹೊಂದಿರುವ ವಜ್ರ ಜಯಂತಿ ಯಾತ್ರೆಯು ಕಳೆದ 75 ವರ್ಷಗಳಲ್ಲಿ ನಮ್ಮ ರಾಷ್ಟ್ರದ ಮಹತ್ತರವಾದ ಸಾಧನೆಗಳನ್ನು ಪ್ರತಿಬಿಂಬಿಸುತ್ತದೆ ಮತ್ತು 100 ನೇ ವರ್ಷಕ್ಕೆ ಕಾಲಿಟ್ಟಾಗ ದೇಶ ಎಲ್ಲಿರಬೇಕು ಎಂಬ ಮಾರ್ಗಸೂಚಿಯನ್ನು ರೂಪಿಸಲು ಸಹಾಯ ಮಾಡಿತು. ರಕ್ಷಣಾ ಸಚಿವಾಲಯ ಮತ್ತು ನ್ಯಾಷನಲ್‌ ಕೆಡೆಟ್ ಕಾರ್ಪ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದೆ, ಜೂನ್ 14 ರಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಧ್ವಜಾರೋಹಣ ಮಾಡಿದರು. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜುಲೈ 20 ರಂದು ಎರಡನೇ ಚರಣದ ಧ್ವಜಾರೋಹಣ ಮಾಡಿದ್ದರು.

India@75 ಪ್ರತಿಷ್ಠಿತ ಕೇರಳ ಕಲಾಮಂಡಲಂ ತಲುಪಿದ ವಜ್ರ ಜಯಂತಿ ಯಾತ್ರೆ!

ಕಾರ್ಯಕ್ರಮದಲ್ಲಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು. ಕಾರ್ಯಕ್ರಮದಲ್ಲಿ ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ಕಾರ್ಯನಿರ್ವಾಹಕ ಅಧ್ಯಕ್ಷ ರಾಜೇಶ್ ಕಲ್ರಾ ಮತ್ತು ಎನ್‌ಸಿಸಿ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಗುರ್ಬೀರ್‌ಪಾಲ್ ಸಿಂಗ್ ಉಪಸ್ಥಿತರಿದ್ದರು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?