2020 Delhi Riots Case: ಗಲಭೆಗೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಪಿತೂರಿ!

2020 Delhi Riots Case: ಗಲಭೆಗೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಪಿತೂರಿ!

Published : Feb 04, 2022, 12:58 PM IST

*ಬೆಂಕಿ ಹಚ್ಚಲು ಸಂಪೂರ್ಣ ಸಿದ್ಧ ಎಂದಿದ್ದ ಖಾಲಿದ್‌
*ಖಾರದ ಪುಡಿ, ಲಾಠಿ ತರಲು ಮೊದಲೇ ಸೂಚಿಸಲಾಗಿತ್ತು
*ಶಾಂತಿ ಸಭೆ ಹೆಸರಿನಲ್ಲಿ ಗಲಭೆಗೆ ಪೂರ್ವತಯಾರಿ
*‘ರಕ್ತ ಹರಿಸಬೇಕು’ ಎಂದು ಶಾಂತಿ ಸಭೆಯಲ್ಲಿ ಖಾಲಿದ್‌ ಮಾತು
*ಗಲಭೆ ಮಾಡಲು ಇತರ ಕಡೆಯಿಂದ ಜನರನ್ನು ಕರೆತರಲಾಗಿತ್ತು

ನವದೆಹಲಿ (ಫೆ. 04):  ಫೆಬ್ರವರಿ 2020ರಲ್ಲಿ ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಹೋರಾಟದ ವೇಳೆ ಸಂಭವಿಸಿದ ಭೀಕರ ಹಿಂಸಾಚಾರ ಪ್ರಕರಣ ಸಂಪೂರ್ಣವಾಗಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್‌ ಖಾಲಿದ್‌ ಸಂಚು ಎಂದು ಕೇಂದ್ರ ಸರ್ಕಾರ ಆರೋಪಿಸಿದೆ. ಇದಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳ ಹೇಳಿಕೆ, ವಾಟ್ಸಾಪ್‌ ಚಾಟ್‌, ಸಿಸಿಟೀವಿ ದೃಶ್ಯಾವಳಿ ಮುಂತಾದ ಸಾಕ್ಷ್ಯಗಳನ್ನು ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಬುಧವಾರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಉಮರ್‌ ಖಾಲಿದ್‌ ಜಾಮೀನು ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲ ಅಮಿತ್‌ ಪ್ರಸಾದ್‌, ಉಮರ್‌ ಖಾಲಿದ್‌ ಶಾಂತಿಯುತ ಪ್ರತಿಭಟನೆಯ ಹೆಸರಲ್ಲಿ ಗಲಭೆ ಪ್ರಚೋದಿಸಲು ಯೋಜಿತವಾದ ಸಂಚು ರೂಪಿಸಿದ್ದರು. ಜ.23, 2020ರಂದು ಭಾಗಿಯಾದ ಸಭೆಯಲ್ಲಿ ರಕ್ತ ಚೆಲ್ಲುವ ಮಾತನಾಡಿದ್ದರು. ಗಲಭೆಯ ಸಂಚಿನಲ್ಲಿ ಅವರ ಸ್ನೇಹಿತರ ಪಾತ್ರವೂ ಇದೆ. ಗಲಭೆ ಉದ್ದೇಶದಿಂದ ಇತರ ಪ್ರದೇಶಗಳಿಂದ ಜನರನ್ನು ಕರೆತರಲಾಗಿತ್ತು ಎಂದು ಸಾಕ್ಷಿ ಸಮೇತ ವಿವರಿಸಿದರು.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ: ಪಂಜಾಬ್ ಸಿಎಂ ಚನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಬಂಧನ!

‘ವಾಟ್ಸಾಪ್‌ ಗ್ರೂಪ್‌ ಚಾಟ್‌ನಲ್ಲಿ ದೆಹಲಿಯ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುವ ಎಲ್ಲಾ ಯೋಜನೆಗಳೂ ರೂಪಿತವಾಗಿದ್ದವು ಎನ್ನುವುದು ಬಹಿರಂಗಗೊಂಡಿದೆ. ‘ಬೆಂಕಿ ಹಚ್ಚೋಕೆ ನಾವು ಸಂಪೂರ್ಣ ತಯಾರಾಗಿದ್ದೇವೆ. ದೊಣ್ಣೆ, ಕಲ್ಲು, ಖಾರದ ಪುಡಿ ಎಲ್ಲವನ್ನೂ ಸಿದ್ಧ ಮಾಡಿಕೊಳ್ಳಿ, ಈಗ ನಾವು ಹಿಂಸಾಚಾರವನ್ನು ಕೊನೆ ಮಾಡಬೇಕು’ ಎನ್ನುವ ಸಂದೇಶಗಳು ಅದರಲ್ಲಿ ಹರಿದಾಡಿವೆ. ಜನವರಿ 15 ಹಾಗೂ 16ರಂದು ಶಾಂತಿಸಭೆ ಎನ್ನುವ ಹೆಸರಿನಲ್ಲಿ ಚಾಂದ್‌ಬಾಗ್‌ನಲ್ಲಿ ಸಭೆ ನಡೆಸಲಾಗಿತ್ತು.

ಈ ಸಭೆಯ ಮೂಲಕವೂ ದೊಣ್ಣೆ, ಕಲ್ಲು, ಖಾರದ ಪುಡಿ ಹಾಗೂ ಆ್ಯಸಿಡ್‌ ಸಂಗ್ರಹಣೆ ಮಾಡಲಾಗಿತ್ತು. ಶಾಂತಿ ಉದ್ದೇಶದ ಸಭೆ ಆಗಿದ್ದಲ್ಲಿ ಇಂಥ ವಸ್ತುಗಳನ್ನು ಏಕೆ ಸಂಗ್ರಹಣೆ ಮಾಡಲಾಗುತ್ತಿತ್ತು?’ ಎಂದು ವಕೀಲರು ಪ್ರಶ್ನಿಸಿದ್ದಾರೆ. ಅಲ್ಲದೆ ಈ ವೇಳೆ ಉಮರ್‌ ಖಾಲಿದ್‌, ‘ಸರ್ಕಾರ ಮುಸ್ಲಿಮರ ವಿರುದ್ಧವಾಗಿದೆ. ಭಾಷಣಗಳು ಕೆಲಸ ಮಾಡುವುದಿಲ್ಲ. ನಾವು ರಕ್ತ ಹರಿಸಬೇಕಿದೆ’ ಎಂದಿದ್ದರು ಎಂದು ತಿಳಿಸಿದರು.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more