ಏಷ್ಯಾನೆಟ್ ಸುವರ್ಣನ್ಯೂಸ್ ಕವರ್ ಸ್ಟೋರಿ ತಂಡದ ತನಿಖೆಗೆ ಸರ್ಕಾರ ಅಲರ್ಟ್, ಭ್ರಷ್ಟರು ಅಮಾನತು!

Nov 25, 2022, 10:41 PM IST

ಏಷ್ಯಾನೆಟ್ ಸುವರ್ಣನ್ಯೂಸ್ ಕವರ್ ಸ್ಟೋರಿ ತಂಡ ತನಿಖಾ ವರದಿ ರಾಜ್ಯದಲ್ಲಿ ಸಂಚನಲ ಸೃಷ್ಟಿಸಿದೆ. ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಕುರಿತು  ಕವರ್ ಸ್ಟೋರಿ ತಂಡ ಕವರ್ ಸ್ಟೋರಿ ತಂಡ ಸ್ಟಿಂಗ್ ಆಪರೇಶನ್ ನಡೆಸಿತ್ತು.  ಕವರ್ ಸ್ಟೋರಿ ತಂಡದ ನಿರಂತರ ಹೋರಾಟದ ಮೂಲಕ ಭ್ರಷ್ಟಾಚಾರ ಬಯಲು ಮಾಡಿತ್ತು. ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಕುರಿತು ವರದಿಗೆ ರಾಜ್ಯ ಸರ್ಕಾರ ಅಲರ್ಟ್ ಆಗಿದೆ.   ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಡೆಯುತ್ತಿರುವ ಬ್ರಷ್ಟಾಚಾರ ಕುರಿತು  ವರದಿ ಬಳಿಕ ಎಚ್ಚೆತ್ತ ಸರ್ಕಾರ ಇದೀಗ 14 ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಸಿಎಂ ಬೊಮ್ಮಾಯಿ ಈ ಆದೇಶ ನೀಡಿದ್ದಾರೆ.