Assembly Elections 2022: ಉತ್ತರವನ್ನು ಗೆದ್ದು ಮತ್ತೆ ದೇಶ ಗೆಲ್ತಾರಾ ನರೇಂದ್ರ ಮೋದಿ?

Assembly Elections 2022: ಉತ್ತರವನ್ನು ಗೆದ್ದು ಮತ್ತೆ ದೇಶ ಗೆಲ್ತಾರಾ ನರೇಂದ್ರ ಮೋದಿ?

Suvarna News   | Asianet News
Published : Jan 09, 2022, 12:53 PM IST

ಯಾರಾಗ್ತಾರೆ ಉತ್ತರದ ರಾಜ್ಯಗಳ ಸಾಮ್ರಾಟ
ಪಂಚ ರಾಜ್ಯ ಚುನಾವಣೆಗೆ ದಿನಾಂಕ ಫಿಕ್ಸ್ ಮಾಡಿದ ಚುನಾವಣಾ ಆಯೋಗ
ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವ ಯುಪಿ ಚುನಾವಣೆ

ಬೆಂಗಳೂರು (ಜ.9): ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ (Election Commission) ದಿನಾಂಕ ಪ್ರಕಟ ಮಾಡಿದೆ. ದೇಶದ ರಾಜಕೀಯ ಭವಿಷ್ಯವನ್ನು ನಿರ್ಧಾರ ಮಾಡುವ ಉತ್ತರ ಪ್ರದೇಶ (Uttar Pradesh) ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ಪಂಜಾಬ್ (Punjab), ಉತ್ತಾರಖಂಡ (Uttarakhand), ಮಣಿಪುರ (Manipur) ಹಾಗೂ ದಕ್ಷಿಣದ ಗೋವಾ (Goa)ರಾಜ್ಯಗಳಲ್ಲಿ ಫೆಬ್ರವರ 10 ರಿಂದ ಮಾರ್ಚ್ 7ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಯೋಗಿ ಆದಿತ್ಯನಾಥ್ (Yogi Adityanath) ಅಥವಾ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akilesh Yadav), ದೇಶದ ಅತೀದೊಡ್ಡ ರಾಜ್ಯ ಉತ್ತರ ಪ್ರದೇಶದ ಮುಂದಿನ ಅಧಿಪತಿ ಯಾರು ಎನ್ನುವುದು ಇನ್ನು ಕೆಲವೇ ತಿಂಗಳಲ್ಲಿ ಗೊತ್ತಾಗಲಿದೆ.

Assembly Election 2022: ಫೆ. 10 ರಿಂದ ಮಾರ್ಚ್ 7ರವರೆಗೆ ಪಂಚರಾಜ್ಯ ಚುನಾವಣೆ, ರ‍್ಯಾಲಿ, ಪಾದಯಾತ್ರೆ, ರೋಡ್‌ಶೋ ಎಲ್ಲವೂ ಬಂದ್!
2024ರಲ್ಲಿ ಮೋದಿ ಮತ್ತೆ ಪ್ರಧಾನಿಯಾಗುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಫಲಿತಾಂಶವೇ ನಿರ್ಣಾಯಕವಾಗಲಿದೆ. 403 ಮತಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವೇ ನೇರ ಎದುರಾಳಿ. ಬಹುಜನ ಸಮಾಜ ಪಾರ್ಟಿ ಹಾಗೂ ಕಾಂಗ್ರೆಸ್ ನಿಂದ ದೊಡ್ಡ ಮಟ್ಟದ ಪೈಪೋಟಿ ಕಡಿಮೆ. ಇನ್ನು ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಕನಿಷ್ಠ 3 ರಾಜ್ಯಗಳಲ್ಲಿ ಗೆಲುವು ಸಾಧಿಸಬೇಕು ಎನ್ನುವುದು ಕಾಂಗ್ರೆಸ್ ನ ಇಚ್ಛೆ. ಇನ್ನೊಂದೆಡೆ ಬಿಜೆಪಿ ಈಗ ಇರುವ ರಾಜ್ಯಗಳನ್ನು ಉಳಿಸಿಕೊಳ್ಳುವುದರೊಂದಿಗೆ ಪಂಜಾಬ್ ಮೇಲೆ ಅಧಿಕಾರ ಸ್ಥಾಪನೆ ಮಾಡುವ ಕನಸು ಕಾಣುತ್ತಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!