Assembly Elections 2022: ಉತ್ತರವನ್ನು ಗೆದ್ದು ಮತ್ತೆ ದೇಶ ಗೆಲ್ತಾರಾ ನರೇಂದ್ರ ಮೋದಿ?

Assembly Elections 2022: ಉತ್ತರವನ್ನು ಗೆದ್ದು ಮತ್ತೆ ದೇಶ ಗೆಲ್ತಾರಾ ನರೇಂದ್ರ ಮೋದಿ?

Published : Jan 09, 2022, 12:53 PM IST

ಯಾರಾಗ್ತಾರೆ ಉತ್ತರದ ರಾಜ್ಯಗಳ ಸಾಮ್ರಾಟ
ಪಂಚ ರಾಜ್ಯ ಚುನಾವಣೆಗೆ ದಿನಾಂಕ ಫಿಕ್ಸ್ ಮಾಡಿದ ಚುನಾವಣಾ ಆಯೋಗ
ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವ ಯುಪಿ ಚುನಾವಣೆ

ಬೆಂಗಳೂರು (ಜ.9): ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ (Election Commission) ದಿನಾಂಕ ಪ್ರಕಟ ಮಾಡಿದೆ. ದೇಶದ ರಾಜಕೀಯ ಭವಿಷ್ಯವನ್ನು ನಿರ್ಧಾರ ಮಾಡುವ ಉತ್ತರ ಪ್ರದೇಶ (Uttar Pradesh) ಸೇರಿದಂತೆ ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ಪಂಜಾಬ್ (Punjab), ಉತ್ತಾರಖಂಡ (Uttarakhand), ಮಣಿಪುರ (Manipur) ಹಾಗೂ ದಕ್ಷಿಣದ ಗೋವಾ (Goa)ರಾಜ್ಯಗಳಲ್ಲಿ ಫೆಬ್ರವರ 10 ರಿಂದ ಮಾರ್ಚ್ 7ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಯೋಗಿ ಆದಿತ್ಯನಾಥ್ (Yogi Adityanath) ಅಥವಾ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akilesh Yadav), ದೇಶದ ಅತೀದೊಡ್ಡ ರಾಜ್ಯ ಉತ್ತರ ಪ್ರದೇಶದ ಮುಂದಿನ ಅಧಿಪತಿ ಯಾರು ಎನ್ನುವುದು ಇನ್ನು ಕೆಲವೇ ತಿಂಗಳಲ್ಲಿ ಗೊತ್ತಾಗಲಿದೆ.

Assembly Election 2022: ಫೆ. 10 ರಿಂದ ಮಾರ್ಚ್ 7ರವರೆಗೆ ಪಂಚರಾಜ್ಯ ಚುನಾವಣೆ, ರ‍್ಯಾಲಿ, ಪಾದಯಾತ್ರೆ, ರೋಡ್‌ಶೋ ಎಲ್ಲವೂ ಬಂದ್!
2024ರಲ್ಲಿ ಮೋದಿ ಮತ್ತೆ ಪ್ರಧಾನಿಯಾಗುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಫಲಿತಾಂಶವೇ ನಿರ್ಣಾಯಕವಾಗಲಿದೆ. 403 ಮತಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವೇ ನೇರ ಎದುರಾಳಿ. ಬಹುಜನ ಸಮಾಜ ಪಾರ್ಟಿ ಹಾಗೂ ಕಾಂಗ್ರೆಸ್ ನಿಂದ ದೊಡ್ಡ ಮಟ್ಟದ ಪೈಪೋಟಿ ಕಡಿಮೆ. ಇನ್ನು ಐದು ರಾಜ್ಯಗಳ ಪೈಕಿ ನಾಲ್ಕು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಕನಿಷ್ಠ 3 ರಾಜ್ಯಗಳಲ್ಲಿ ಗೆಲುವು ಸಾಧಿಸಬೇಕು ಎನ್ನುವುದು ಕಾಂಗ್ರೆಸ್ ನ ಇಚ್ಛೆ. ಇನ್ನೊಂದೆಡೆ ಬಿಜೆಪಿ ಈಗ ಇರುವ ರಾಜ್ಯಗಳನ್ನು ಉಳಿಸಿಕೊಳ್ಳುವುದರೊಂದಿಗೆ ಪಂಜಾಬ್ ಮೇಲೆ ಅಧಿಕಾರ ಸ್ಥಾಪನೆ ಮಾಡುವ ಕನಸು ಕಾಣುತ್ತಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?