ಪಕ್ಷದ ಧ್ವಜ ಹಿಡಿದು ರಾಮ ಮಂದಿರಕ್ಕೆ ಕಾಂಗ್ರೆಸ್ ನಾಯಕರ ಭೇಟಿ, ಪಾರ್ಟಿ ಫ್ಲ್ಯಾಗ್‌ಗೆ ಸ್ಥಳೀಯರ ವಿರೋಧ!

Jan 15, 2024, 11:02 PM IST

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಯನ್ನು ಕಾಂಗ್ರೆಸ್ ಬಹಿಷ್ಕರಿಸಿದೆ. ಉತ್ತರ ಪ್ರದೇಶ ಕಾಂಗ್ರೆಸೆ್ ಇಂದು ಆಯೋಧ್ಯೆಗೆ ಭೇಟಿ ನೀಡಿ ರಾಮಲಲ್ಲಾ ದರ್ಶನ ಪಡೆದಿದೆ. ಆದರೆ ರಾಮ ಮಂದಿರಕ್ಕೆ ತೆರಳುವಾಗ ಕಾಂಗ್ರೆಸ್ ಪಕ್ಷದ ಧ್ವಜ ಹಿಡಿದು ತೆರಳಿದೆ. ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ರಾಮ ಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿ, ಇದೀಗ ಧಾರ್ಮಿಕ ಕ್ಷೇತ್ರಕ್ಕೆ ಪಕ್ಷದ ಧ್ವಜ ಹಿಡಿದು ಆಗಮಿಸಿರುವುದೇಕೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಧ್ವಜ ಕಿತ್ತೆಸೆದು ಜಟಾಪಟಿ ನಡೆಸಿದ್ದಾರೆ.