BTS 2021: Start Up ಕುರಿತು ವರ್ಚುವಲ್‌ ಸಭೆ : ಸಚಿವ ಅಶ್ವತ್ಥ್ ನಾರಾಯಾಣ್‌ ನೇತೃತ್ವ!

BTS 2021: Start Up ಕುರಿತು ವರ್ಚುವಲ್‌ ಸಭೆ : ಸಚಿವ ಅಶ್ವತ್ಥ್ ನಾರಾಯಾಣ್‌ ನೇತೃತ್ವ!

Suvarna News   | Asianet News
Published : Nov 18, 2021, 04:59 PM IST

*ನವೆಂಬರ್ 17ರಿಂದ ಆರಂಭವಾದ ಟೆಕ್‌ ಶೃಂಗ
*ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಚಾಲನೆ
*ಇಂದು (ನ.18)Start Up ಖುರಿತು ವರ್ಚುವಲ್‌ ಸಭೆ
*ಐಟಿ-ಬಿಟಿ ಸಚಿವ ಅಶ್ವತ್ಥ್‌ ನಾರಾಯಣ್‌ ನೇತೃತ್ವ

ಬೆಂಗಳೂರು(ನ.18): ಬಹು ನಿರೀಕ್ಷಿತ ಬೆಂಗಳೂರು ತಂತ್ರಜ್ಞಾನ ಶೃಂಗ (Bengaluru Tech Summit)ದ 24ನೇ ವರ್ಷದ ಸಮಾವೇಶ ನವೆಂಬರ್ 17ರಿಂದ ಆರಂಭವಾಗಿದೆ. ನಗರದ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಹೈಬ್ರಿಡ್‌ ಮಾದರಿಯಲ್ಲಿ ಮುಂದಿನ ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶಕ್ಕೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು (M. Venkaiah Naidu) ಚಾಲನೆ ನೀಡಿದ್ದಾರೆ. ಟೆಕ್‌ ಸಮ್ಮಿಟ್‌ನ ಎರಡನೇ ದಿನವಾದ ಇಂದು (ನ. 18) ಐಟಿ ಬಿಟಿ (IT-BT) ಸಚಿವ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ವರ್ಚುವಲ್‌ (virtual) ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ್ಟಾರ್ಟಪ್‌ಗಳ (ಹೊಸ ಉದ್ಯಮ -Start Up) ಕುರಿತು ಚರ್ಚೆ ನಡೆದಿದ್ದು 30 ದೇಶಗಳು ಭಾಗಿಯಾಗಿವೆ.  ಕಾರ್ಯಕ್ರಮದಲ್ಲಿ ಭಾಗಿಯಾದ ಗಣ್ಯರು ಹೊಸ ಉದ್ಯಮಗಳಿಗೆ ಇರುವ ಅವಕಾಶಗಳ ಬಗ್ಗೆ ಮಾತನಾಡಿದ್ದರೆ.

BTS 2021; ಸಂಶೋಧನೆಗಳಿಂದ ಕೃಷಿ ಸುಧಾರಣೆಯಾಗಬೇಕು; ವೆಂಕಯ್ಯ ನಾಯ್ಡು

‘ಡ್ರೈವಿಂಗ್‌ ದಿ ನೆಕ್ಸ್ಟ್‌’ ಘೋಷ ವಾಕ್ಯದಡಿ ನಡೆಯುತಿರುವ ಬಿಟಿಎಸ್‌-2021ರಲ್ಲಿ (BTS 2021) 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ. ಯುಎಇ (UAE), ಐರೋಪ್ಯ ಒಕ್ಕೂಟ, ವಿಯೆಟ್ನಾಂ ಮತ್ತು ದಕ್ಷಿಣ ಆಫ್ರಿಕಾ ಇದೇ ಮೊದಲ ಬಾರಿಗೆ ಪಾಲ್ಗೊಳ್ಳುತ್ತಿದ್ದು, ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನಟ್‌ ಮತ್ತು ಆಸ್ಪ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಸೇರಿದಂತೆ ಹಲವು ಗಣ್ಯರು ವರ್ಚುವಲ್ ರೂಪದಲ್ಲಿ ಭಾಗವಹಿಸಲಿದ್ದಾರೆ. ಜಾಗತಿಕ ಮಟ್ಟದ 300ಕ್ಕೂ ಹೆಚ್ಚು ಕಂಪನಿಗಳು ಮತ್ತು 5 ಸಾವಿರಕ್ಕೂ ಹೆಚ್ಚು ನವೋದ್ಯಮಗಳು, ವಾಣಿಜ್ಯ ವಲಯದ 20 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ವರ್ಚುವಲ್ ರೂಪದಲ್ಲಿ 5 ಲಕ್ಷಕ್ಕೂ ಹೆಚ್ಚು ಆಸಕ್ತರು ಈ ಶೃಂಗದಲ್ಲಿ ಭಾಗವಹಿಸಲಿದ್ದಾರೆ.
 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more