ಭ್ರಷ್ಟಾಚಾರ, ನಿರುದ್ಯೋಗ ಮುಕ್ತ, ರೈತ ಸ್ನೇಹಿ ಸರ್ಕಾರ ನೀಡುತ್ತೇವೆ: ಪಂಜಾಬ್ ಸಿಎಂ ಮಾನ್ ಭರವಸೆ

ಭ್ರಷ್ಟಾಚಾರ, ನಿರುದ್ಯೋಗ ಮುಕ್ತ, ರೈತ ಸ್ನೇಹಿ ಸರ್ಕಾರ ನೀಡುತ್ತೇವೆ: ಪಂಜಾಬ್ ಸಿಎಂ ಮಾನ್ ಭರವಸೆ

Suvarna News   | Asianet News
Published : Mar 17, 2022, 09:39 AM IST

ಆಮ್‌ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್‌ ಪಂಜಾಬಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳ ಹೊರತಾದ ಪಕ್ಷ ಅಧಿಕಾರಕ್ಕೆ ಬಂದಂತಾಗಿದೆ.

ಚಂಡೀಗಢ (ಮಾ. 17): ಆಮ್‌ ಆದ್ಮಿ ಪಕ್ಷದ ನಾಯಕ ಭಗವಂತ ಮಾನ್‌ ಪಂಜಾಬಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯದಲ್ಲಿ ಮೊದಲ ಬಾರಿ ಕಾಂಗ್ರೆಸ್‌ ಹಾಗೂ ಅಕಾಲಿದಳ ಹೊರತಾದ ಪಕ್ಷ ಅಧಿಕಾರಕ್ಕೆ ಬಂದಂತಾಗಿದೆ.

ಈ ವೇಳೆ ದೆಹಲಿಯ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ, ದೆಹಲಿಯ ಸಚಿವರಾದ ಸತ್ಯೇಂದ್ರ ಜೈನ್‌, ಹಾಗೂ ಪಂಜಾಬಿನ ಚುನಾವಣೆಯಲ್ಲಿ ಗಲುವು ಸಾಧಿಸಿದ ವಿಧಾನಸಭಾ ನಾಯಕರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಪಾಲ್ಗೊಂಡ ಎಲ್ಲ ಪುರುಷರು ಹಳದಿ ಪೇಟ ಹಾಗೂ ಮಹಿಳೆಯರು ಹಳದಿ ದುಪಟ್ಟಾ ಧರಿಸಿ ಬಂದಿದ್ದು ವಿಶೇಷವಾಗಿತ್ತು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಮಾನ್‌ ‘ನಮ್ಮ ಸರ್ಕಾರವು ನಿರುದ್ಯೋಗ, ಭ್ರಷ್ಟಾಚಾರ ಹಾಗೂ ಪಂಜಾಬಿನಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯವನ್ನು ಆರಂಭಿಸಲಾಗುವುದು’ ಎಂದರು.

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more