ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

ಬಿಹಾರದಲ್ಲಿ ರಾಜಕೀಯದ ಥ್ರಿಲ್ಲರ್‌, ತಿಂಗಳಿಗೊಮ್ಮೆ ಗೇರ್‌ ಬದಲಿಸುತ್ತಿರುವ ನಿತೀಶ್‌ ಕುಮಾರ್‌!

Published : Jan 26, 2024, 10:51 PM IST

ಬಿಹಾರ ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್‌ ಸಿಗುತ್ತಿದೆ. ಕೆಲ ತಿಂಗಳ ಹಿಂದೆ ಬಿಜೆಪಿಗೆ ಕೈಕೊಟ್ಟು  ಮಹಾಘಟಬಂದನ್‌ ಜೊತೆ ಸೇರಿ ಸಿಎಂ ಆಗಿದ್ದ ನಿತೀಶ್‌ ಕುಮಾರ್‌, ಈಗ ಮಹಾಘಟಬಂದನ್‌ಗೆ ಕೈಕೊಟ್ಟು ಎನ್‌ಡಿಎಗೆ ಸೇರಲು ಸಜ್ಜಾಗಿದ್ದಾರೆ.
 

ಬೆಂಗಳೂರು (ಜ.26): ಬಿಹಾರ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್‌ ಸಿಗುತ್ತಿದೆ. ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಯು ನಡುವೆ ಮತ್ತೆ ಮೈತ್ರಿ ಖಾತ್ರಿ ಆಯ್ತು ಎನ್ನುವ ಮಾತುಗಳಿದ್ದು, ಭಾನುವಾರ ನಿತೀಶ್‌ ಕುಮಾರ್‌ ಹಾಗೂ ಸುಶೀಲ್‌ ಕುಮಾರ್‌ ಮೋದಿ ಪದಗ್ರಹಣ ಮಾಡುವ ಸಾಧ್ಯತೆ ಇದೆ. ಸರಣಿ ಸಭೆ ನಡೆದರೂ ನಾಯಕರು ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

ಈ ನಡುವೆ ಶುಕ್ರವಾರ ಆರ್‌ಜೆಡಿ ಹಿರಿಯ ಹಾಗೂ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌, ನಿತೀಶ್‌ ಕುಮಾರ್‌ಗೆ ಸಾಕಷ್ಟು ಬಾರಿ ಕರೆ ಮಾಡಿದರೂ ಒಂದನ್ನೂ ಅವರು ಸ್ವೀಕರಿಸಿಲ್ಲ. ಇದೆಲ್ಲದರ ನಡುವೆ ಬಿಹಾರದಲ್ಲಿ ಮಹಾಘಟಬಂದನ್‌ ಸರ್ಕಾರ ಐಸಿಯುನಲ್ಲಿರುವುದು ಖಚಿತವಾಗಿದೆ.

ಬಂಡಾಯದ ಬಾವುಟ ಬೀಸಿದ ದಂಡನಾಯಕರು! ಅಂತರ್ಯುದ್ಧಕ್ಕೆ ಛಿದ್ರವಾಗುತ್ತಾ ಘಟಬಂಧನ್..?

ಇನ್ನು ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲೂ ನಿತೀಶ್‌ ಕುಮಾರ್‌ ಹಾಗೂ ಆರ್‌ಜೆಡಿ ನಾಯಕ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ದೂರ ದೂರು ಕುಳಿತುಕೊಂಡಿದ್ದರು. ಅವರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಇದರಿಂದಾಗಿ ಸರ್ಕಾರ ಇನ್ನು ಕೆಲವೇ ದಿನಗಳಲ್ಲಿ ಪತನವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more