Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Published : Mar 03, 2024, 10:26 AM IST

ಲೋಕಸಮರದ ಅಖಾಡಕ್ಕೆ ಇಳಿದಿರುವ ಕೇಸರಿ ಪಾಳಯ, ಅಂದುಕೊಂಡಂತೆ ಚುನಾವಣೆ ಘೋಷಣೆಗೂ ಮೊದಲು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.. ಬರೋಬ್ಬರಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರೋ ಹೈಕಮಾಂಡ್ 16 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ನವದೆಹಲಿಯಲ್ಲಿ ಸಂಜೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ(BJP) ನಾಯಕರು, 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಘೋಷಣೆ ಮಾಡಿದ್ರು. 195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ, ಇಬ್ಬರು ಮಾಜಿ ಸಿಎಂಗಳಿಗೆ ಅವಕಾಶ ನೀಡಿದೆ. ಪಟ್ಟಿಯಲ್ಲಿ 28 ಮಹಿಳೆಯರು, 47 ಯುವಕರು, 27 ಎಸ್ಸಿ ಹಾಗೂ 18 ಎಸ್ಟಿ ಹಾಗೂ 57 ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಿದ್ರೆ ಮೊದಲ ಪಟ್ಟಿಯಲ್ಲಿ ಒಟ್ಟು 34 ಕೇಂದ್ರ ಸಚಿವರ ಕ್ಷೇತ್ರಗಳನ್ನ ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಬಿಜೆಪಿ ಹಿಂದಿ ಭಾಷಿಕ ರಾಜ್ಯಗಳನ್ನ ಹೆಚ್ಚಾಗಿ ಟಾರ್ಗೆಟ್ ಮಾಡಿದ್ದು, ಕೇರಳ ಹಾಗೂ ತೆಲಂಗಾಣ ಹೊರತು ಪಡಿಸಿ ಉತ್ತರ ಭಾರತದ ಬಹುತೇಕ ರಾಜ್ಯಗಳ ಟಿಕೆಟ್ ಘೋಷಣೆ ಮಾಡಿದೆ.195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ ಉತ್ತರ ಪ್ರದೇಶದ 51, ಪಶ್ಚಿಮ ಬಂಗಾಳದ 20, ಮಧ್ಯ ಪ್ರದೇಶ 24, ಗುಜರಾತ್ನ 15, ರಾಜಸ್ಥಾನ 15, ಕೇರಳ 12,ತೆಲಂಗಾಣ 9, ಅಸ್ಸಾಂ    11, ಜಾರ್ಖಂಡ್ 11, ಛತ್ತೀಸ್ಗಢ 11, ದೆಹಲಿ 5, ಜಮ್ಮುಕಾಶ್ಮೀರ 2, ಉತ್ತರಾಖಂಡ್ 2, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರಾ 1, ಅಂಡಮಾನ್1, ದಿಯು ದಮನ್ 1 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಘಟಾನುಘಟಿ ನಾಯಕರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಪ್ರಧಾನಿ ಮೋದಿ(Narendra Modi) ನಿರೀಕ್ಷೆಯಂತೆ ವಾರಾಣಸಿಯಿಂದ ಕಣಕ್ಕೆ ಇಳಿಯಲಿದ್ದಾರೆ. ರಾಜನಾಥ್ ಸಿಂಗ್ ಲಖನೌ ಹಾಗೂ ಅಮಿತ್ ಶಾ ಗಾಂಧಿನಗರದಿಂದ ಸ್ಪರ್ಧೆ ಮಾಡಲಿದ್ದಾರೆ. ಇನ್ನೂ ಪಟ್ಟಿಯಲ್ಲಿ ಇಬ್ಬರು ಮಾಜಿ ಸಿಎಂಗಳಿಗೂ ಬಿಜೆಪಿ ಸ್ಥಾನ ನೀಡಿದೆ.

ಇದನ್ನೂ ವೀಕ್ಷಿಸಿ:  Anant Ambani Wedding: ಸಾಮಾನ್ಯರಿಗೂ ಆತಿಥ್ಯ ನೀಡಿದ ಕುಬೇರ..! ಜಾಮ್‌ನಗರದಲ್ಲಿ 145 ವಿಮಾನಗಳು ಲ್ಯಾಂಡ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more