Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Published : Mar 03, 2024, 10:26 AM IST

ಲೋಕಸಮರದ ಅಖಾಡಕ್ಕೆ ಇಳಿದಿರುವ ಕೇಸರಿ ಪಾಳಯ, ಅಂದುಕೊಂಡಂತೆ ಚುನಾವಣೆ ಘೋಷಣೆಗೂ ಮೊದಲು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.. ಬರೋಬ್ಬರಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರೋ ಹೈಕಮಾಂಡ್ 16 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ನವದೆಹಲಿಯಲ್ಲಿ ಸಂಜೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ(BJP) ನಾಯಕರು, 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಘೋಷಣೆ ಮಾಡಿದ್ರು. 195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ, ಇಬ್ಬರು ಮಾಜಿ ಸಿಎಂಗಳಿಗೆ ಅವಕಾಶ ನೀಡಿದೆ. ಪಟ್ಟಿಯಲ್ಲಿ 28 ಮಹಿಳೆಯರು, 47 ಯುವಕರು, 27 ಎಸ್ಸಿ ಹಾಗೂ 18 ಎಸ್ಟಿ ಹಾಗೂ 57 ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಿದ್ರೆ ಮೊದಲ ಪಟ್ಟಿಯಲ್ಲಿ ಒಟ್ಟು 34 ಕೇಂದ್ರ ಸಚಿವರ ಕ್ಷೇತ್ರಗಳನ್ನ ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಬಿಜೆಪಿ ಹಿಂದಿ ಭಾಷಿಕ ರಾಜ್ಯಗಳನ್ನ ಹೆಚ್ಚಾಗಿ ಟಾರ್ಗೆಟ್ ಮಾಡಿದ್ದು, ಕೇರಳ ಹಾಗೂ ತೆಲಂಗಾಣ ಹೊರತು ಪಡಿಸಿ ಉತ್ತರ ಭಾರತದ ಬಹುತೇಕ ರಾಜ್ಯಗಳ ಟಿಕೆಟ್ ಘೋಷಣೆ ಮಾಡಿದೆ.195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ ಉತ್ತರ ಪ್ರದೇಶದ 51, ಪಶ್ಚಿಮ ಬಂಗಾಳದ 20, ಮಧ್ಯ ಪ್ರದೇಶ 24, ಗುಜರಾತ್ನ 15, ರಾಜಸ್ಥಾನ 15, ಕೇರಳ 12,ತೆಲಂಗಾಣ 9, ಅಸ್ಸಾಂ    11, ಜಾರ್ಖಂಡ್ 11, ಛತ್ತೀಸ್ಗಢ 11, ದೆಹಲಿ 5, ಜಮ್ಮುಕಾಶ್ಮೀರ 2, ಉತ್ತರಾಖಂಡ್ 2, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರಾ 1, ಅಂಡಮಾನ್1, ದಿಯು ದಮನ್ 1 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಘಟಾನುಘಟಿ ನಾಯಕರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಪ್ರಧಾನಿ ಮೋದಿ(Narendra Modi) ನಿರೀಕ್ಷೆಯಂತೆ ವಾರಾಣಸಿಯಿಂದ ಕಣಕ್ಕೆ ಇಳಿಯಲಿದ್ದಾರೆ. ರಾಜನಾಥ್ ಸಿಂಗ್ ಲಖನೌ ಹಾಗೂ ಅಮಿತ್ ಶಾ ಗಾಂಧಿನಗರದಿಂದ ಸ್ಪರ್ಧೆ ಮಾಡಲಿದ್ದಾರೆ. ಇನ್ನೂ ಪಟ್ಟಿಯಲ್ಲಿ ಇಬ್ಬರು ಮಾಜಿ ಸಿಎಂಗಳಿಗೂ ಬಿಜೆಪಿ ಸ್ಥಾನ ನೀಡಿದೆ.

ಇದನ್ನೂ ವೀಕ್ಷಿಸಿ:  Anant Ambani Wedding: ಸಾಮಾನ್ಯರಿಗೂ ಆತಿಥ್ಯ ನೀಡಿದ ಕುಬೇರ..! ಜಾಮ್‌ನಗರದಲ್ಲಿ 145 ವಿಮಾನಗಳು ಲ್ಯಾಂಡ್..!

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more