Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Published : Mar 03, 2024, 10:26 AM IST

ಲೋಕಸಮರದ ಅಖಾಡಕ್ಕೆ ಇಳಿದಿರುವ ಕೇಸರಿ ಪಾಳಯ, ಅಂದುಕೊಂಡಂತೆ ಚುನಾವಣೆ ಘೋಷಣೆಗೂ ಮೊದಲು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.. ಬರೋಬ್ಬರಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರೋ ಹೈಕಮಾಂಡ್ 16 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ನವದೆಹಲಿಯಲ್ಲಿ ಸಂಜೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ(BJP) ನಾಯಕರು, 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಘೋಷಣೆ ಮಾಡಿದ್ರು. 195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ, ಇಬ್ಬರು ಮಾಜಿ ಸಿಎಂಗಳಿಗೆ ಅವಕಾಶ ನೀಡಿದೆ. ಪಟ್ಟಿಯಲ್ಲಿ 28 ಮಹಿಳೆಯರು, 47 ಯುವಕರು, 27 ಎಸ್ಸಿ ಹಾಗೂ 18 ಎಸ್ಟಿ ಹಾಗೂ 57 ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಿದ್ರೆ ಮೊದಲ ಪಟ್ಟಿಯಲ್ಲಿ ಒಟ್ಟು 34 ಕೇಂದ್ರ ಸಚಿವರ ಕ್ಷೇತ್ರಗಳನ್ನ ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಬಿಜೆಪಿ ಹಿಂದಿ ಭಾಷಿಕ ರಾಜ್ಯಗಳನ್ನ ಹೆಚ್ಚಾಗಿ ಟಾರ್ಗೆಟ್ ಮಾಡಿದ್ದು, ಕೇರಳ ಹಾಗೂ ತೆಲಂಗಾಣ ಹೊರತು ಪಡಿಸಿ ಉತ್ತರ ಭಾರತದ ಬಹುತೇಕ ರಾಜ್ಯಗಳ ಟಿಕೆಟ್ ಘೋಷಣೆ ಮಾಡಿದೆ.195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ ಉತ್ತರ ಪ್ರದೇಶದ 51, ಪಶ್ಚಿಮ ಬಂಗಾಳದ 20, ಮಧ್ಯ ಪ್ರದೇಶ 24, ಗುಜರಾತ್ನ 15, ರಾಜಸ್ಥಾನ 15, ಕೇರಳ 12,ತೆಲಂಗಾಣ 9, ಅಸ್ಸಾಂ    11, ಜಾರ್ಖಂಡ್ 11, ಛತ್ತೀಸ್ಗಢ 11, ದೆಹಲಿ 5, ಜಮ್ಮುಕಾಶ್ಮೀರ 2, ಉತ್ತರಾಖಂಡ್ 2, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರಾ 1, ಅಂಡಮಾನ್1, ದಿಯು ದಮನ್ 1 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಘಟಾನುಘಟಿ ನಾಯಕರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಪ್ರಧಾನಿ ಮೋದಿ(Narendra Modi) ನಿರೀಕ್ಷೆಯಂತೆ ವಾರಾಣಸಿಯಿಂದ ಕಣಕ್ಕೆ ಇಳಿಯಲಿದ್ದಾರೆ. ರಾಜನಾಥ್ ಸಿಂಗ್ ಲಖನೌ ಹಾಗೂ ಅಮಿತ್ ಶಾ ಗಾಂಧಿನಗರದಿಂದ ಸ್ಪರ್ಧೆ ಮಾಡಲಿದ್ದಾರೆ. ಇನ್ನೂ ಪಟ್ಟಿಯಲ್ಲಿ ಇಬ್ಬರು ಮಾಜಿ ಸಿಎಂಗಳಿಗೂ ಬಿಜೆಪಿ ಸ್ಥಾನ ನೀಡಿದೆ.

ಇದನ್ನೂ ವೀಕ್ಷಿಸಿ:  Anant Ambani Wedding: ಸಾಮಾನ್ಯರಿಗೂ ಆತಿಥ್ಯ ನೀಡಿದ ಕುಬೇರ..! ಜಾಮ್‌ನಗರದಲ್ಲಿ 145 ವಿಮಾನಗಳು ಲ್ಯಾಂಡ್..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more