Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Published : Mar 03, 2024, 10:26 AM IST

ಲೋಕಸಮರದ ಅಖಾಡಕ್ಕೆ ಇಳಿದಿರುವ ಕೇಸರಿ ಪಾಳಯ, ಅಂದುಕೊಂಡಂತೆ ಚುನಾವಣೆ ಘೋಷಣೆಗೂ ಮೊದಲು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.. ಬರೋಬ್ಬರಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರೋ ಹೈಕಮಾಂಡ್ 16 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ನವದೆಹಲಿಯಲ್ಲಿ ಸಂಜೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ(BJP) ನಾಯಕರು, 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಘೋಷಣೆ ಮಾಡಿದ್ರು. 195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ, ಇಬ್ಬರು ಮಾಜಿ ಸಿಎಂಗಳಿಗೆ ಅವಕಾಶ ನೀಡಿದೆ. ಪಟ್ಟಿಯಲ್ಲಿ 28 ಮಹಿಳೆಯರು, 47 ಯುವಕರು, 27 ಎಸ್ಸಿ ಹಾಗೂ 18 ಎಸ್ಟಿ ಹಾಗೂ 57 ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಿದ್ರೆ ಮೊದಲ ಪಟ್ಟಿಯಲ್ಲಿ ಒಟ್ಟು 34 ಕೇಂದ್ರ ಸಚಿವರ ಕ್ಷೇತ್ರಗಳನ್ನ ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಬಿಜೆಪಿ ಹಿಂದಿ ಭಾಷಿಕ ರಾಜ್ಯಗಳನ್ನ ಹೆಚ್ಚಾಗಿ ಟಾರ್ಗೆಟ್ ಮಾಡಿದ್ದು, ಕೇರಳ ಹಾಗೂ ತೆಲಂಗಾಣ ಹೊರತು ಪಡಿಸಿ ಉತ್ತರ ಭಾರತದ ಬಹುತೇಕ ರಾಜ್ಯಗಳ ಟಿಕೆಟ್ ಘೋಷಣೆ ಮಾಡಿದೆ.195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ ಉತ್ತರ ಪ್ರದೇಶದ 51, ಪಶ್ಚಿಮ ಬಂಗಾಳದ 20, ಮಧ್ಯ ಪ್ರದೇಶ 24, ಗುಜರಾತ್ನ 15, ರಾಜಸ್ಥಾನ 15, ಕೇರಳ 12,ತೆಲಂಗಾಣ 9, ಅಸ್ಸಾಂ    11, ಜಾರ್ಖಂಡ್ 11, ಛತ್ತೀಸ್ಗಢ 11, ದೆಹಲಿ 5, ಜಮ್ಮುಕಾಶ್ಮೀರ 2, ಉತ್ತರಾಖಂಡ್ 2, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರಾ 1, ಅಂಡಮಾನ್1, ದಿಯು ದಮನ್ 1 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಘಟಾನುಘಟಿ ನಾಯಕರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಪ್ರಧಾನಿ ಮೋದಿ(Narendra Modi) ನಿರೀಕ್ಷೆಯಂತೆ ವಾರಾಣಸಿಯಿಂದ ಕಣಕ್ಕೆ ಇಳಿಯಲಿದ್ದಾರೆ. ರಾಜನಾಥ್ ಸಿಂಗ್ ಲಖನೌ ಹಾಗೂ ಅಮಿತ್ ಶಾ ಗಾಂಧಿನಗರದಿಂದ ಸ್ಪರ್ಧೆ ಮಾಡಲಿದ್ದಾರೆ. ಇನ್ನೂ ಪಟ್ಟಿಯಲ್ಲಿ ಇಬ್ಬರು ಮಾಜಿ ಸಿಎಂಗಳಿಗೂ ಬಿಜೆಪಿ ಸ್ಥಾನ ನೀಡಿದೆ.

ಇದನ್ನೂ ವೀಕ್ಷಿಸಿ:  Anant Ambani Wedding: ಸಾಮಾನ್ಯರಿಗೂ ಆತಿಥ್ಯ ನೀಡಿದ ಕುಬೇರ..! ಜಾಮ್‌ನಗರದಲ್ಲಿ 145 ವಿಮಾನಗಳು ಲ್ಯಾಂಡ್..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more