Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Loksabha: 2024ರ ಲೋಕಸಮರಕ್ಕೆ ಬಿಜೆಪಿ ಸೇನಾನಿಗಳ ಘೋಷಣೆ! 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Published : Mar 03, 2024, 10:26 AM IST

ಲೋಕಸಮರದ ಅಖಾಡಕ್ಕೆ ಇಳಿದಿರುವ ಕೇಸರಿ ಪಾಳಯ, ಅಂದುಕೊಂಡಂತೆ ಚುನಾವಣೆ ಘೋಷಣೆಗೂ ಮೊದಲು ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.. ಬರೋಬ್ಬರಿ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿರೋ ಹೈಕಮಾಂಡ್ 16 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ.

ನವದೆಹಲಿಯಲ್ಲಿ ಸಂಜೆ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ(BJP) ನಾಯಕರು, 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನ ಘೋಷಣೆ ಮಾಡಿದ್ರು. 195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ, ಇಬ್ಬರು ಮಾಜಿ ಸಿಎಂಗಳಿಗೆ ಅವಕಾಶ ನೀಡಿದೆ. ಪಟ್ಟಿಯಲ್ಲಿ 28 ಮಹಿಳೆಯರು, 47 ಯುವಕರು, 27 ಎಸ್ಸಿ ಹಾಗೂ 18 ಎಸ್ಟಿ ಹಾಗೂ 57 ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್(Ticket) ನೀಡಿದ್ರೆ ಮೊದಲ ಪಟ್ಟಿಯಲ್ಲಿ ಒಟ್ಟು 34 ಕೇಂದ್ರ ಸಚಿವರ ಕ್ಷೇತ್ರಗಳನ್ನ ಘೋಷಣೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಬಿಜೆಪಿ ಹಿಂದಿ ಭಾಷಿಕ ರಾಜ್ಯಗಳನ್ನ ಹೆಚ್ಚಾಗಿ ಟಾರ್ಗೆಟ್ ಮಾಡಿದ್ದು, ಕೇರಳ ಹಾಗೂ ತೆಲಂಗಾಣ ಹೊರತು ಪಡಿಸಿ ಉತ್ತರ ಭಾರತದ ಬಹುತೇಕ ರಾಜ್ಯಗಳ ಟಿಕೆಟ್ ಘೋಷಣೆ ಮಾಡಿದೆ.195 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಜೆಪಿ ಉತ್ತರ ಪ್ರದೇಶದ 51, ಪಶ್ಚಿಮ ಬಂಗಾಳದ 20, ಮಧ್ಯ ಪ್ರದೇಶ 24, ಗುಜರಾತ್ನ 15, ರಾಜಸ್ಥಾನ 15, ಕೇರಳ 12,ತೆಲಂಗಾಣ 9, ಅಸ್ಸಾಂ    11, ಜಾರ್ಖಂಡ್ 11, ಛತ್ತೀಸ್ಗಢ 11, ದೆಹಲಿ 5, ಜಮ್ಮುಕಾಶ್ಮೀರ 2, ಉತ್ತರಾಖಂಡ್ 2, ಅರುಣಾಚಲ ಪ್ರದೇಶ 2, ಗೋವಾ 1, ತ್ರಿಪುರಾ 1, ಅಂಡಮಾನ್1, ದಿಯು ದಮನ್ 1 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಘಟಾನುಘಟಿ ನಾಯಕರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಪ್ರಧಾನಿ ಮೋದಿ(Narendra Modi) ನಿರೀಕ್ಷೆಯಂತೆ ವಾರಾಣಸಿಯಿಂದ ಕಣಕ್ಕೆ ಇಳಿಯಲಿದ್ದಾರೆ. ರಾಜನಾಥ್ ಸಿಂಗ್ ಲಖನೌ ಹಾಗೂ ಅಮಿತ್ ಶಾ ಗಾಂಧಿನಗರದಿಂದ ಸ್ಪರ್ಧೆ ಮಾಡಲಿದ್ದಾರೆ. ಇನ್ನೂ ಪಟ್ಟಿಯಲ್ಲಿ ಇಬ್ಬರು ಮಾಜಿ ಸಿಎಂಗಳಿಗೂ ಬಿಜೆಪಿ ಸ್ಥಾನ ನೀಡಿದೆ.

ಇದನ್ನೂ ವೀಕ್ಷಿಸಿ:  Anant Ambani Wedding: ಸಾಮಾನ್ಯರಿಗೂ ಆತಿಥ್ಯ ನೀಡಿದ ಕುಬೇರ..! ಜಾಮ್‌ನಗರದಲ್ಲಿ 145 ವಿಮಾನಗಳು ಲ್ಯಾಂಡ್..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more