ಕೇಂದ್ರ ಸರ್ಕಾರದ ಸಾಧನೆ, ಕೊರೋನಾ ನಿಯಂತ್ರಣದ ಬಗ್ಗೆ ಇಂದು ಜೆಪಿ ನಡ್ಡಾ ಸಂವಾದ

Jun 14, 2020, 1:41 PM IST

ಬೆಂಗಳೂರು (ಜೂ. 14): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ಕಾರ್ಯಕರ್ತರು ಹಾಗೂ ಸಾಮಾನ್ಯ ಜನರೊಂದಿಗೆ ಭಾನುವಾರ ಸಂಜೆ 6ಕ್ಕೆ ಕರ್ನಾಟಕ ಜನಸಂವಾದ ರಾರ‍ಯಲಿ ಹೆಸರಿನಲ್ಲಿ ವಿಡಿಯೋ ಸಂವಾದವೊಂದನ್ನು ನಡೆಸಲಿದ್ದಾರೆ.

ಕೇಂದ್ರ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು, ವಿವಿಧ ಯೋಜನೆಗಳ ಬಗ್ಗೆ ನಡ್ಡಾ ಅವರು ಕಾರ್ಯಕರ್ತರು ಹಾಗೂ ಜನರ ಅಭಿಪ್ರಾಯ ಪಡೆಯಲಿದ್ದಾರೆ. ಇದೇ ವೇಳೆ ಕೊರೋನಾ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ. ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರದ ವತಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಲಿದ್ದಾರೆ.