ಕಳೆದ 9 ತಿಂಗಳಿನಿಂದ ಮುಖ್ಮಮಂತ್ರಿಯಾಗಿ ಆಡಳಿತ ನಡೆಸುತ್ತಿರುವ ಸಿಎಂ ಬೊಮ್ಮಾಯಿ ಬದಲಾವಣೆ ಮಾತುಗಳು ಕೇಳಿಬರುತ್ತಿದೆ. ಇದರ ನಡುವೆ ಬಿಜೆಪಿ ಹೈಕಮಾಂಡ್ ಸಮೀಕ್ಷೆ ನಡೆಸಿ ವರದಿ ತರಿಸಿಕೊಂಡಿದೆ. ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ, ವಿಸ್ತರಣೆ ಮಾತುಗಳು ಇಂದು ನಿನ್ನೆಯದಲ್ಲ. ಸಿಎಂ ದೆಹಲಿ ಬೇಟಿ, ರಾಷ್ಟ್ರನಾಯಕರ ಕರ್ನಾಟಕ ಭೇಟಿ ವೇಳೆ ಇದೇ ಮಾತುಗಳು ಕೇಳಿಬರುತ್ತಿದೆ. ಆದರೆ ಸರ್ವೆ ವರದಿ ತರಿಸಿಕೊಂಡಿರುವ ಕೇಂದ್ರ ಬಿಜೆಪಿ, ಸಣ್ಣ ಮಟ್ಟದಲ್ಲಿ ಸಂಪುಟ ಸರ್ಜರಿ ನಡೆಸಲು ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ