70ಕ್ಕೂ ಹೆಚ್ಚಿನ ಹಾಲಿ ಎಂಪಿಗಳಿಗೆ ಈ ಬಾರಿ ಟಿಕೆಟ್ ಡೌಟ್..? ತಮಿಳುನಾಡಿನಲ್ಲಿ ಕಮಲ ಅರಳಿಸಲು ಮೋದಿ ಮಾಸ್ಟರ್ ಪ್ಲಾನ್

70ಕ್ಕೂ ಹೆಚ್ಚಿನ ಹಾಲಿ ಎಂಪಿಗಳಿಗೆ ಈ ಬಾರಿ ಟಿಕೆಟ್ ಡೌಟ್..? ತಮಿಳುನಾಡಿನಲ್ಲಿ ಕಮಲ ಅರಳಿಸಲು ಮೋದಿ ಮಾಸ್ಟರ್ ಪ್ಲಾನ್

Published : Mar 02, 2024, 05:34 PM IST

18 ರಾಜ್ಯಗಳು ಮತ್ತು 150 ಕ್ಷೇತ್ರಗಳ ಕುರಿತು ನಡೆದ ಚರ್ಚೆ
ಈ ಬಾರಿಯೂ ಹೊಸಬರಿಗೆ ಮತ್ತು ಮಹಿಳೆಯರಿಗೆ ಆಧ್ಯತೆ
ಕೆಲಸ ಮಾಡದೇ ಇದ್ದವರಿಗೆ ಮೋದಿ ಕೊಡ್ತಾರಾ ಶಾಕ್..? 

ಲೋಕ ಸಮರಕ್ಕೆ ಬಿಜೆಪಿ ಮೊದಲ ಮುದ್ರೆ ಒತ್ತಿದೆ. ಎಲೆಕ್ಷನ್ ಕಮಿಟಿಯೊಂದಿಗೆ ಮೋದಿ(Narendra Modi) ಮೊದಲ ಮೀಟಿಂಗ್ ನಡೆಸಿದ್ದಾರೆ. ರಾತ್ರಿ ಆರಂಭವಾದ ಮೀಟಿಂಗ್ ಬೆಳಗಿನ ಜಾವದವರೆಗೂ ನಡೆದ ಮೀಟಿಂಗ್‌ನಲ್ಲಿ ಹಲವಾರು ಪ್ರಮುಖ ಚರ್ಚೆಗಳು ನಡೆದಿವೆ. ಕೆಲವು ಕ್ಷೇತ್ರಗಳ ಕ್ಯಾಂಡಿಡೇಟ್‌ಗಳ ಪಟ್ಟಿ ಕೂಡ ರೆಡಿಯಾಗಿದೆಯಂತೆ. ಬಿಜೆಪಿ(BJP) ಪಾಳೆಯದಲ್ಲಿ ಲೋಕಸಭೆ ಎಲೆಕ್ಷನ್ ತಯಾರಿಗೆ ಅಧಿಕೃತ ಮುದ್ರೆ ಬಿದ್ದಿದೆ. ನರೇಂದ್ರ ಮೋದಿ ಮೊದಲ ಮೀಟಿಂಗ್ ನಡೆಸಿದ್ದಾರೆ. ರಾತ್ರಿ 10:30ಕ್ಕೆ ಆರಂಭವಾದ ಮೀಟಿಂಗ್(Meeting) ಬೆಳಗಿನ ಜಾವ 3:15ರ ವರೆಗೂ ಮೀಟಿಂಗ್ ನಡೆದಿದೆ. ನಾಲ್ಕು ಗಂಟೆಗೂ ಹೆಚ್ಚು ಸಮಯಗಳ ಕಾಲ ನಡೆದ ಈ ಮೀಟಿಂಗ್‌ನಲ್ಲಿ ಹಲವು ಪ್ರಮುಖ ಕ್ಷೇತ್ರಗಳ ಕುರಿತು ಚರ್ಚೆಗಳು ನಡೆದಿವೆ. ಪ್ರಧಾನಿಗಳ ಮನೆಯಲ್ಲಿ ನಡೆದ ಈ ಮೀಟಿಂಗ್ನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪ್ರಕಾಶ್ ಜಾವ್ಡೇಕರ್, ಮನ್ಸುಖ್ ಮಾಂಡವಿಯಾ, ಪುಷ್ಕರ್ ಧಾಮಿ, ಪ್ರಮೋದ್ ಸಾವಂತ, ಭೂಪೇಂದ್ರ ಯಾದವ್, ಜೋತಿರಾದಿತ್ಯ ಸಿಂಧಿಯಾ, ಕೇಶವ್ ಮೌರ್ಯ ಮತ್ತು ಉತ್ತರ ಪ್ರದೇಶ್ ಸಿಎಂ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದರು. ಲೋಕಸಭೆ ಎಲೆಕ್ಷನ್‌ಗೆ(Loksabha Election) ನಡೆದ ಮೊದಲ ಮೀಟಿಂಗ್ನಲ್ಲಿ, ಮೋದಿ ಈ ಪ್ರಮುಖ ನಿರ್ಧಾರವನ್ನು ಕೈಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಒಟ್ಟು 303 ಸೀಟ್ಗಳನ್ನು ಗೆದ್ದಿದೆ. ಈಗಿರುವ 303 ಎಂಪಿಗಳಲ್ಲಿ 70ಕ್ಕೂ ಹೆಚ್ಚಿನ ಎಂಪಿಗಳಿಗೆ ಈ ಬಾರಿ ಟಿಕೆಟ್ ನೀಡುವುದು ಡೌಟ್ ಎಂದು ಹೇಳಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಅಲ್ಲೇ ಇಡ್ಲಿ ತಿಂದವನು ಅಲ್ಲೇ ಬಾಂಬೂ ಇಟ್ಟನಾ..? ರಾಮೇಶ್ವರಂ ಕೆಫೆಯೇ ಟಾರ್ಗೆಟ್ ಆಗಿದ್ದು ಯಾಕೆ..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more