70ಕ್ಕೂ ಹೆಚ್ಚಿನ ಹಾಲಿ ಎಂಪಿಗಳಿಗೆ ಈ ಬಾರಿ ಟಿಕೆಟ್ ಡೌಟ್..? ತಮಿಳುನಾಡಿನಲ್ಲಿ ಕಮಲ ಅರಳಿಸಲು ಮೋದಿ ಮಾಸ್ಟರ್ ಪ್ಲಾನ್

70ಕ್ಕೂ ಹೆಚ್ಚಿನ ಹಾಲಿ ಎಂಪಿಗಳಿಗೆ ಈ ಬಾರಿ ಟಿಕೆಟ್ ಡೌಟ್..? ತಮಿಳುನಾಡಿನಲ್ಲಿ ಕಮಲ ಅರಳಿಸಲು ಮೋದಿ ಮಾಸ್ಟರ್ ಪ್ಲಾನ್

Published : Mar 02, 2024, 05:34 PM IST

18 ರಾಜ್ಯಗಳು ಮತ್ತು 150 ಕ್ಷೇತ್ರಗಳ ಕುರಿತು ನಡೆದ ಚರ್ಚೆ
ಈ ಬಾರಿಯೂ ಹೊಸಬರಿಗೆ ಮತ್ತು ಮಹಿಳೆಯರಿಗೆ ಆಧ್ಯತೆ
ಕೆಲಸ ಮಾಡದೇ ಇದ್ದವರಿಗೆ ಮೋದಿ ಕೊಡ್ತಾರಾ ಶಾಕ್..? 

ಲೋಕ ಸಮರಕ್ಕೆ ಬಿಜೆಪಿ ಮೊದಲ ಮುದ್ರೆ ಒತ್ತಿದೆ. ಎಲೆಕ್ಷನ್ ಕಮಿಟಿಯೊಂದಿಗೆ ಮೋದಿ(Narendra Modi) ಮೊದಲ ಮೀಟಿಂಗ್ ನಡೆಸಿದ್ದಾರೆ. ರಾತ್ರಿ ಆರಂಭವಾದ ಮೀಟಿಂಗ್ ಬೆಳಗಿನ ಜಾವದವರೆಗೂ ನಡೆದ ಮೀಟಿಂಗ್‌ನಲ್ಲಿ ಹಲವಾರು ಪ್ರಮುಖ ಚರ್ಚೆಗಳು ನಡೆದಿವೆ. ಕೆಲವು ಕ್ಷೇತ್ರಗಳ ಕ್ಯಾಂಡಿಡೇಟ್‌ಗಳ ಪಟ್ಟಿ ಕೂಡ ರೆಡಿಯಾಗಿದೆಯಂತೆ. ಬಿಜೆಪಿ(BJP) ಪಾಳೆಯದಲ್ಲಿ ಲೋಕಸಭೆ ಎಲೆಕ್ಷನ್ ತಯಾರಿಗೆ ಅಧಿಕೃತ ಮುದ್ರೆ ಬಿದ್ದಿದೆ. ನರೇಂದ್ರ ಮೋದಿ ಮೊದಲ ಮೀಟಿಂಗ್ ನಡೆಸಿದ್ದಾರೆ. ರಾತ್ರಿ 10:30ಕ್ಕೆ ಆರಂಭವಾದ ಮೀಟಿಂಗ್(Meeting) ಬೆಳಗಿನ ಜಾವ 3:15ರ ವರೆಗೂ ಮೀಟಿಂಗ್ ನಡೆದಿದೆ. ನಾಲ್ಕು ಗಂಟೆಗೂ ಹೆಚ್ಚು ಸಮಯಗಳ ಕಾಲ ನಡೆದ ಈ ಮೀಟಿಂಗ್‌ನಲ್ಲಿ ಹಲವು ಪ್ರಮುಖ ಕ್ಷೇತ್ರಗಳ ಕುರಿತು ಚರ್ಚೆಗಳು ನಡೆದಿವೆ. ಪ್ರಧಾನಿಗಳ ಮನೆಯಲ್ಲಿ ನಡೆದ ಈ ಮೀಟಿಂಗ್ನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪ್ರಕಾಶ್ ಜಾವ್ಡೇಕರ್, ಮನ್ಸುಖ್ ಮಾಂಡವಿಯಾ, ಪುಷ್ಕರ್ ಧಾಮಿ, ಪ್ರಮೋದ್ ಸಾವಂತ, ಭೂಪೇಂದ್ರ ಯಾದವ್, ಜೋತಿರಾದಿತ್ಯ ಸಿಂಧಿಯಾ, ಕೇಶವ್ ಮೌರ್ಯ ಮತ್ತು ಉತ್ತರ ಪ್ರದೇಶ್ ಸಿಎಂ ಯೋಗಿ ಆದಿತ್ಯನಾಥ್ ಭಾಗಿಯಾಗಿದ್ದರು. ಲೋಕಸಭೆ ಎಲೆಕ್ಷನ್‌ಗೆ(Loksabha Election) ನಡೆದ ಮೊದಲ ಮೀಟಿಂಗ್ನಲ್ಲಿ, ಮೋದಿ ಈ ಪ್ರಮುಖ ನಿರ್ಧಾರವನ್ನು ಕೈಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಒಟ್ಟು 303 ಸೀಟ್ಗಳನ್ನು ಗೆದ್ದಿದೆ. ಈಗಿರುವ 303 ಎಂಪಿಗಳಲ್ಲಿ 70ಕ್ಕೂ ಹೆಚ್ಚಿನ ಎಂಪಿಗಳಿಗೆ ಈ ಬಾರಿ ಟಿಕೆಟ್ ನೀಡುವುದು ಡೌಟ್ ಎಂದು ಹೇಳಲಾಗುತ್ತಿದೆ. 

ಇದನ್ನೂ ವೀಕ್ಷಿಸಿ:  ಅಲ್ಲೇ ಇಡ್ಲಿ ತಿಂದವನು ಅಲ್ಲೇ ಬಾಂಬೂ ಇಟ್ಟನಾ..? ರಾಮೇಶ್ವರಂ ಕೆಫೆಯೇ ಟಾರ್ಗೆಟ್ ಆಗಿದ್ದು ಯಾಕೆ..?

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more