ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಸಿಎಂ ಆಯ್ಕೆ.. ಶಾ ಕಟ್ಟಾಜ್ಞೆ..!

Published : Sep 27, 2023, 12:47 PM IST

ಮಧ್ಯಪ್ರದೇಶದಲ್ಲಿ ಚುನಾವಣೆ ಬಳಿಕ ಶಿವರಾಜ್ ಸಿಂಗ್‌ಗೆ ಕೊಕ್?
ಹಾಲಿ ಮುಖ್ಯಮಂತ್ರಿಗೆ ಬಿಗ್ ಶಾಕ್ ನೀಡಿದ ಅಮಿತ್ ಶಾ ಮಾತು
ಚುನಾವಣೆ ಬಳಿಕ ಸಿಎಂ ಆಯ್ಕೆ ಎಂದ ಬಿಜೆಪಿ ಚಾಣಕ್ಯ ಶಾ

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಎಚ್ಚರಿಕೆಯ ನಡೆ ಇಡಲಾಗುತ್ತಿದೆ. ಕರ್ನಾಟಕದಲ್ಲಿ ಮಾಡಿದ ತಪ್ಪು ಮರುಕಳಿಸದಂತೆ ಬಿಜೆಪಿ ಪ್ಲ್ಯಾನ್ ಮಾಡುತ್ತಿದಿ. ಕರ್ನಾಟಕ ಸೋಲಿನಿಂದ ಬಿಜೆಪಿ(BJP) ನಾಯಕರು ಪಾಠ ಕಲಿತಂತೆ ಕಾಣುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಮಧ್ಯಪ್ರದೇಶದಲ್ಲಿ(Madhya Pradesh) ಬಿಜೆಪಿ 2ನೇ ಪಟ್ಟಿ ಬಿಡುಗಡೆ ಮಾಡಿದೆ. 39 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಹೈಕಮಾಂಡ್ ಬಿಡುಗಡೆ ಮಾಡಿದೆ. ಇದುವರೆಗೂ 230 ಕ್ಷೇತ್ರಗಳ ಪೈಕಿ 78 ಕ್ಷೇತ್ರಕ್ಕೆ ಅಭ್ಯರ್ಥಿ ಫೈನಲ್  ಮಾಡಲಾಗಿದೆ. ಮೂವರು ಕೇಂದ್ರ ಸಚಿವರಿಗೂ ವಿಧಾನಸಭೆ ಟಿಕೆಟ್ (Assembly ticket) ನೀಡಲಾಗಿದೆ. ಜೊತೆಗೆ ಮೂವರು ಸಂಸದರಿಗೂ ವಿಧಾನಸಭೆ ಟಿಕೆಟ್ ಘೋಷಣೆ ಮಾಡಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಗೆಲುವೊಂದೇ ಬಿಜೆಪಿ ಮಾನದಂಡವಾಗಿದೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲು ಹೈಕಮಾಂಡ್‌ ಮುಂದಾಗಿದೆ. ಹಿನ್ನಡೆಯಾಗುವ ಕ್ಷೇತ್ರದಲ್ಲಿ ಕೇಂದ್ರ ಸಚಿವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಈ ಮೂಲಕ ಬಹುಮತ ಸಾಧಿಸಲು ಹೈಕಮಾಂಡ್‌ನಿಂದ ರಣತಂತ್ರ ಮಾಡಲಾಗಿದೆ. ಸುಖಾಸುಮ್ಮನೆ ಟಿಕೆಟ್ ಬದಲಾಯಿಸಿ ಕರ್ನಾಟಕದಲ್ಲಿ ಹಿನ್ನಡೆಯನ್ನು ಬಿಜೆಪಿ ಅನುಭವಿಸಿತ್ತು. ಟಿಕೆಟ್ ಘೋಷಣೆಯಲ್ಲೂ ಭಾರೀ ವಿಳಂಬವನ್ನು ಮಾಡಿತ್ತು.

ಇದನ್ನೂ ವೀಕ್ಷಿಸಿ:  ಬಿಜೆಪಿ-ಜೆಡಿಎಸ್ ಮೈತ್ರಿ.. ಅಡಕತ್ತರಿಯಲ್ಲಿ ಸಿಎಂ ಇಬ್ರಾಹಿಂ !

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more