ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

Published : Jun 15, 2022, 09:25 PM IST

"ಪ್ರಧಾನಿ ಮೋದಿಗೆ ನಾಯಿ ರೀತಿ ಸಾವು ಬರುತ್ತೆ" ರಾಹುಲ್‌ ಗಾಂಧಿ ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ಶೇಖ್ ಹುಸೇನ್‌  ನಾಲಿಗೆ ಹರಿಬಿಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ಶೇಖ್ ಹುಸೇನ್‌ನನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರು (ಜೂನ್ 15): ರಾಹುಲ್ ಗಾಂಧಿ (Rahul Gandhi) ಅವರನ್ನು ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ (Maharashtra) ಕಾಂಗ್ರೆಸ್ ಶಾಸಕ ಶೇಖ್ ಹುಸೇನ್ (Sheikh Hussain), ಪ್ರಧಾನಿ ಮೋದಿ (Prime Minister Modi) ನಾಯಿ ರೀತಿ ಸಾಯ್ತಾರೆ ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದರು. ಇದರ ಬೆನ್ನಲ್ಲಿಯೇ ಅವರನ್ನು ಬಂಧನ ಮಾಡುವಂತೆ ಬಿಜೆಪಿ ಆಗ್ರಹಿಸಿದೆ.

ರಾಹುಲ್ ಗಾಂಧಿಯನ್ನು ಮೆಚ್ಚಿಸುವ ಭರದಲ್ಲಿ ಶೇಖ್ ಹುಸೇನ್, ಪ್ರಧಾನಿ ಮೋದಿ ಕುರಿತಾಗಿ ವಿವಾದತ್ಮಕವಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ನಗರ ಅಧ್ಯಕ್ಷ ಶೇಖ್ ಹುಸೇನ್ ವಿರುದ್ಧ ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಮುಂದೆ ಬಂದು ದ್ವೇಷದ ವಿಷವನ್ನು ತಡೆಯುವ ಅಗತ್ಯವಿದೆ: ನಾಸಿರುದ್ದೀನ್ ಶಾ

ನನ್ನ ಹೇಳಿಕೆಗೆ ನೋಟಿಸ್ ಕೊಡುವ ಸಾಧ್ಯತೆ ಇದೆ. ಇದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಹಿಂದೆಯೂ ಹೆದರಿಲ್ಲ. ಮುಂದೆಯೂ ಯಾರಿಗೂ ಹೆದರೋದಿಲ್ಲ. ನನ್ನ ಹೋರಾಟ ನಿಲ್ಲಿಸೋದಿಲ್ಲ ಎಂದು ಶೇಖ್ ಹುಸೇನ್ ಹೇಳಿದ್ದಾರೆ. ಮಂಗಳವಾರ ನಾಗ್ಪುರದ ಗಿಟ್ಟಿಖಾದನ್ ಠಾಣೆಯಲ್ಲಿ ಎಫ್‌ಐಆರ್ ಅನ್ನು ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು) ಮತ್ತು 504 ಐಪಿಸಿ (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದಾಖಲಿಸಲಾಗಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more