ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

ಪ್ರಧಾನಿ ಮೋದಿ ನಾಯಿ ರೀತಿ ಸಾಯ್ತಾರೆ ಎಂದು ನಾಲಿಗೆ ಹರಿಬಿಟ್ಟ ಕಾಂಗ್ರೆಸ್‌ ಶಾಸಕ ಶೇಖ್‌ ಹುಸೇನ್‌!

Published : Jun 15, 2022, 09:25 PM IST

"ಪ್ರಧಾನಿ ಮೋದಿಗೆ ನಾಯಿ ರೀತಿ ಸಾವು ಬರುತ್ತೆ" ರಾಹುಲ್‌ ಗಾಂಧಿ ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ ಕಾಂಗ್ರೆಸ್‌ ಶಾಸಕ ಶೇಖ್ ಹುಸೇನ್‌  ನಾಲಿಗೆ ಹರಿಬಿಟ್ಟಿದ್ದಾರೆ. ಇದರ ಬೆನ್ನಲ್ಲಿಯೇ ಶೇಖ್ ಹುಸೇನ್‌ನನ್ನು ಬಂಧಿಸುವಂತೆ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರು (ಜೂನ್ 15): ರಾಹುಲ್ ಗಾಂಧಿ (Rahul Gandhi) ಅವರನ್ನು ಬೆಂಬಲಿಸುವ ಭರದಲ್ಲಿ ಮಹಾರಾಷ್ಟ್ರದ (Maharashtra) ಕಾಂಗ್ರೆಸ್ ಶಾಸಕ ಶೇಖ್ ಹುಸೇನ್ (Sheikh Hussain), ಪ್ರಧಾನಿ ಮೋದಿ (Prime Minister Modi) ನಾಯಿ ರೀತಿ ಸಾಯ್ತಾರೆ ಎಂದು ಹೇಳುವ ಮೂಲಕ ಉದ್ಧಟತನ ಮೆರೆದಿದ್ದರು. ಇದರ ಬೆನ್ನಲ್ಲಿಯೇ ಅವರನ್ನು ಬಂಧನ ಮಾಡುವಂತೆ ಬಿಜೆಪಿ ಆಗ್ರಹಿಸಿದೆ.

ರಾಹುಲ್ ಗಾಂಧಿಯನ್ನು ಮೆಚ್ಚಿಸುವ ಭರದಲ್ಲಿ ಶೇಖ್ ಹುಸೇನ್, ಪ್ರಧಾನಿ ಮೋದಿ ಕುರಿತಾಗಿ ವಿವಾದತ್ಮಕವಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದಕ್ಕಾಗಿ ಕಾಂಗ್ರೆಸ್ ಮಾಜಿ ನಗರ ಅಧ್ಯಕ್ಷ ಶೇಖ್ ಹುಸೇನ್ ವಿರುದ್ಧ ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಧಾನಿ ಮೋದಿ ಮುಂದೆ ಬಂದು ದ್ವೇಷದ ವಿಷವನ್ನು ತಡೆಯುವ ಅಗತ್ಯವಿದೆ: ನಾಸಿರುದ್ದೀನ್ ಶಾ

ನನ್ನ ಹೇಳಿಕೆಗೆ ನೋಟಿಸ್ ಕೊಡುವ ಸಾಧ್ಯತೆ ಇದೆ. ಇದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಹಿಂದೆಯೂ ಹೆದರಿಲ್ಲ. ಮುಂದೆಯೂ ಯಾರಿಗೂ ಹೆದರೋದಿಲ್ಲ. ನನ್ನ ಹೋರಾಟ ನಿಲ್ಲಿಸೋದಿಲ್ಲ ಎಂದು ಶೇಖ್ ಹುಸೇನ್ ಹೇಳಿದ್ದಾರೆ. ಮಂಗಳವಾರ ನಾಗ್ಪುರದ ಗಿಟ್ಟಿಖಾದನ್ ಠಾಣೆಯಲ್ಲಿ ಎಫ್‌ಐಆರ್ ಅನ್ನು ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು) ಮತ್ತು 504 ಐಪಿಸಿ (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ದಾಖಲಿಸಲಾಗಿದೆ.

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more