News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ!

News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ!

Published : Sep 08, 2022, 10:37 PM IST

ಗುಲಾಮಗಿರಿಯ ಒಂದೇ ಒಂದು ಕುರುಹುಗಳನ್ನು ಉಳಿಸಲು ಬಿಡೋದಿಲ್ಲ ಎನ್ನುವ ಮಾತಿಗೆ ಬದ್ಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸೆಂಟ್ರಲ್‌ ವಿಸ್ತಾ ಅವೆನ್ಯೂ ಲೋಕಾರ್ಪಣೆಯಾಗಿದೆ. ರಾಜಪಥ ಎನ್ನುವ ಹೆಸರಿನಲ್ಲಿ ಕರೆಸಿಕೊಳ್ಳುತ್ತಿದ್ದ ಇಂಡಿಯಾ ಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ರಸ್ತೆಗೆ ಈಗ ಕರ್ತವ್ಯ ಪಥ ಎಂದು ನಾಮಕರಣ ಮಾಡಲಾಗಿದೆ.
 

ಬೆಂಗಳೂರು (ಸೆ.8): ಇತ್ತೀಚೆಗಷ್ಟೇ ನೌಕಾಪಡೆಯ ಧ್ವಜದಲ್ಲಿ ಸೇಂಟ್‌ ಜಾರ್ಜ್‌ನ ಕ್ರಾಸ್‌ ಬದಲಾಯಿಸಿದ್ದ ನರೇಂದ್ರ ಮೋದಿ ಅದೇ ಸ್ಥಳದಲ್ಲಿ ಗುಲಾಮಗಿರಿಯ ಯಾವುದೇ ಕುರುಹುಗಳನ್ನು ಉಳಿಸಬಾರದು ಎಂದು ಹೇಳಿದ್ದರು. ಅದರಂತೆ, ಗುರುವಾರ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್‌ ವಿಸ್ತಾ ಅವೆನ್ಯೂವನ್ನು ಪ್ರಧಾನಿ ಮೋದಿ ಲೋಕಾಪರ್ಣೆ ಮಾಡಿದ್ದು, ಶುಕ್ರವಾರದಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ.

ಇದರ ಅನಾವರಣ ಸಂದರ್ಭದಲ್ಲಿ ಇಂಡಿಯಾಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ಮಾರ್ಗದ ಹೆಸರನ್ನು ರಾಜಪಥದ ಬದಲಾಗಿ ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಿದರು. ಅಲ್ಲದೆ, ಇಂಡಿಯಾ ಗೇಟ್‌ನಲ್ಲಿನ 28 ಅಡಿ ಎತ್ತರದ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಪ್ರತಿಮೆಯನ್ನೂ ಮೋದಿ ಅನಾವರಣ ಮಾಡಿದರು. ಈ ಸ್ಥಳದಲ್ಲಿ ಹಿಂದೆ ಬ್ರಿಟಿಷ್‌ ದೊರೆಯ ಪ್ರತಿಮೆ ಇದ್ದವು.

ಗಣರಾಜ್ಯೋತ್ಸವ ಪರೇಡ್‌ಗೆ ಸೆಂಟ್ರಲ್‌ ವಿಸ್ತಾ ಯೋಜನೆಯ ಕಾರ್ಮಿಕರಿಗೆ ಆಹ್ವಾನ: ಪ್ರಧಾನಿ ಮೋದಿ!

ಒಟ್ಟಾರೆ ಈ ಯೋಜನೆಗೆ 477 ಕೋಟಿ ವೆಚ್ಚವಾಗಿದೆ. ನವೀಕರಣಕ್ಕಾಗಿ 20 ತಿಂಗಳು ಕಾರ್ಮಿಕರು ಶ್ರಮ ವಹಿಸಿದ್ದಾರೆ. 3.9 ಲಕ್ಷ ಚದರ ಕಿಲೋಮೀಟರ್‌ ಹುಲ್ಲುಗಾವಲನ್ನು ಇಲ್ಲಿ ನಿರ್ಮಾಣ ಮಾಡಲಾಗಿದೆ. ಹೊಸ ಸೆಂಟ್ರಲ್‌ ವಿಸ್ತಾದಲ್ಲಿ ಶೀಘ್ರದಲ್ಲಿಯೇ ನೂತನ ಸಂಸತ್‌ ಭವನ ಕೂಡ ಉದ್ಘಾಟನೆಯಾಗಲಿದೆ.

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!