News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ!

News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ!

Published : Sep 08, 2022, 10:37 PM IST

ಗುಲಾಮಗಿರಿಯ ಒಂದೇ ಒಂದು ಕುರುಹುಗಳನ್ನು ಉಳಿಸಲು ಬಿಡೋದಿಲ್ಲ ಎನ್ನುವ ಮಾತಿಗೆ ಬದ್ಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸೆಂಟ್ರಲ್‌ ವಿಸ್ತಾ ಅವೆನ್ಯೂ ಲೋಕಾರ್ಪಣೆಯಾಗಿದೆ. ರಾಜಪಥ ಎನ್ನುವ ಹೆಸರಿನಲ್ಲಿ ಕರೆಸಿಕೊಳ್ಳುತ್ತಿದ್ದ ಇಂಡಿಯಾ ಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ರಸ್ತೆಗೆ ಈಗ ಕರ್ತವ್ಯ ಪಥ ಎಂದು ನಾಮಕರಣ ಮಾಡಲಾಗಿದೆ.
 

ಬೆಂಗಳೂರು (ಸೆ.8): ಇತ್ತೀಚೆಗಷ್ಟೇ ನೌಕಾಪಡೆಯ ಧ್ವಜದಲ್ಲಿ ಸೇಂಟ್‌ ಜಾರ್ಜ್‌ನ ಕ್ರಾಸ್‌ ಬದಲಾಯಿಸಿದ್ದ ನರೇಂದ್ರ ಮೋದಿ ಅದೇ ಸ್ಥಳದಲ್ಲಿ ಗುಲಾಮಗಿರಿಯ ಯಾವುದೇ ಕುರುಹುಗಳನ್ನು ಉಳಿಸಬಾರದು ಎಂದು ಹೇಳಿದ್ದರು. ಅದರಂತೆ, ಗುರುವಾರ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್‌ ವಿಸ್ತಾ ಅವೆನ್ಯೂವನ್ನು ಪ್ರಧಾನಿ ಮೋದಿ ಲೋಕಾಪರ್ಣೆ ಮಾಡಿದ್ದು, ಶುಕ್ರವಾರದಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ.

ಇದರ ಅನಾವರಣ ಸಂದರ್ಭದಲ್ಲಿ ಇಂಡಿಯಾಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ಮಾರ್ಗದ ಹೆಸರನ್ನು ರಾಜಪಥದ ಬದಲಾಗಿ ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಿದರು. ಅಲ್ಲದೆ, ಇಂಡಿಯಾ ಗೇಟ್‌ನಲ್ಲಿನ 28 ಅಡಿ ಎತ್ತರದ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಪ್ರತಿಮೆಯನ್ನೂ ಮೋದಿ ಅನಾವರಣ ಮಾಡಿದರು. ಈ ಸ್ಥಳದಲ್ಲಿ ಹಿಂದೆ ಬ್ರಿಟಿಷ್‌ ದೊರೆಯ ಪ್ರತಿಮೆ ಇದ್ದವು.

ಗಣರಾಜ್ಯೋತ್ಸವ ಪರೇಡ್‌ಗೆ ಸೆಂಟ್ರಲ್‌ ವಿಸ್ತಾ ಯೋಜನೆಯ ಕಾರ್ಮಿಕರಿಗೆ ಆಹ್ವಾನ: ಪ್ರಧಾನಿ ಮೋದಿ!

ಒಟ್ಟಾರೆ ಈ ಯೋಜನೆಗೆ 477 ಕೋಟಿ ವೆಚ್ಚವಾಗಿದೆ. ನವೀಕರಣಕ್ಕಾಗಿ 20 ತಿಂಗಳು ಕಾರ್ಮಿಕರು ಶ್ರಮ ವಹಿಸಿದ್ದಾರೆ. 3.9 ಲಕ್ಷ ಚದರ ಕಿಲೋಮೀಟರ್‌ ಹುಲ್ಲುಗಾವಲನ್ನು ಇಲ್ಲಿ ನಿರ್ಮಾಣ ಮಾಡಲಾಗಿದೆ. ಹೊಸ ಸೆಂಟ್ರಲ್‌ ವಿಸ್ತಾದಲ್ಲಿ ಶೀಘ್ರದಲ್ಲಿಯೇ ನೂತನ ಸಂಸತ್‌ ಭವನ ಕೂಡ ಉದ್ಘಾಟನೆಯಾಗಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?