News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ!

News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ!

Published : Sep 08, 2022, 10:37 PM IST

ಗುಲಾಮಗಿರಿಯ ಒಂದೇ ಒಂದು ಕುರುಹುಗಳನ್ನು ಉಳಿಸಲು ಬಿಡೋದಿಲ್ಲ ಎನ್ನುವ ಮಾತಿಗೆ ಬದ್ಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸೆಂಟ್ರಲ್‌ ವಿಸ್ತಾ ಅವೆನ್ಯೂ ಲೋಕಾರ್ಪಣೆಯಾಗಿದೆ. ರಾಜಪಥ ಎನ್ನುವ ಹೆಸರಿನಲ್ಲಿ ಕರೆಸಿಕೊಳ್ಳುತ್ತಿದ್ದ ಇಂಡಿಯಾ ಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ರಸ್ತೆಗೆ ಈಗ ಕರ್ತವ್ಯ ಪಥ ಎಂದು ನಾಮಕರಣ ಮಾಡಲಾಗಿದೆ.
 

ಬೆಂಗಳೂರು (ಸೆ.8): ಇತ್ತೀಚೆಗಷ್ಟೇ ನೌಕಾಪಡೆಯ ಧ್ವಜದಲ್ಲಿ ಸೇಂಟ್‌ ಜಾರ್ಜ್‌ನ ಕ್ರಾಸ್‌ ಬದಲಾಯಿಸಿದ್ದ ನರೇಂದ್ರ ಮೋದಿ ಅದೇ ಸ್ಥಳದಲ್ಲಿ ಗುಲಾಮಗಿರಿಯ ಯಾವುದೇ ಕುರುಹುಗಳನ್ನು ಉಳಿಸಬಾರದು ಎಂದು ಹೇಳಿದ್ದರು. ಅದರಂತೆ, ಗುರುವಾರ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್‌ ವಿಸ್ತಾ ಅವೆನ್ಯೂವನ್ನು ಪ್ರಧಾನಿ ಮೋದಿ ಲೋಕಾಪರ್ಣೆ ಮಾಡಿದ್ದು, ಶುಕ್ರವಾರದಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ.

ಇದರ ಅನಾವರಣ ಸಂದರ್ಭದಲ್ಲಿ ಇಂಡಿಯಾಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ಮಾರ್ಗದ ಹೆಸರನ್ನು ರಾಜಪಥದ ಬದಲಾಗಿ ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಿದರು. ಅಲ್ಲದೆ, ಇಂಡಿಯಾ ಗೇಟ್‌ನಲ್ಲಿನ 28 ಅಡಿ ಎತ್ತರದ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಪ್ರತಿಮೆಯನ್ನೂ ಮೋದಿ ಅನಾವರಣ ಮಾಡಿದರು. ಈ ಸ್ಥಳದಲ್ಲಿ ಹಿಂದೆ ಬ್ರಿಟಿಷ್‌ ದೊರೆಯ ಪ್ರತಿಮೆ ಇದ್ದವು.

ಗಣರಾಜ್ಯೋತ್ಸವ ಪರೇಡ್‌ಗೆ ಸೆಂಟ್ರಲ್‌ ವಿಸ್ತಾ ಯೋಜನೆಯ ಕಾರ್ಮಿಕರಿಗೆ ಆಹ್ವಾನ: ಪ್ರಧಾನಿ ಮೋದಿ!

ಒಟ್ಟಾರೆ ಈ ಯೋಜನೆಗೆ 477 ಕೋಟಿ ವೆಚ್ಚವಾಗಿದೆ. ನವೀಕರಣಕ್ಕಾಗಿ 20 ತಿಂಗಳು ಕಾರ್ಮಿಕರು ಶ್ರಮ ವಹಿಸಿದ್ದಾರೆ. 3.9 ಲಕ್ಷ ಚದರ ಕಿಲೋಮೀಟರ್‌ ಹುಲ್ಲುಗಾವಲನ್ನು ಇಲ್ಲಿ ನಿರ್ಮಾಣ ಮಾಡಲಾಗಿದೆ. ಹೊಸ ಸೆಂಟ್ರಲ್‌ ವಿಸ್ತಾದಲ್ಲಿ ಶೀಘ್ರದಲ್ಲಿಯೇ ನೂತನ ಸಂಸತ್‌ ಭವನ ಕೂಡ ಉದ್ಘಾಟನೆಯಾಗಲಿದೆ.

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?