News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ!

News Hour: ಗುಲಾಮಗಿರಿಯ ಕುರುಹು ಅಳಿಸಿದ ಮೋದಿ ಕನಸಿನ ಯೋಜನೆಯ ಲೋಕಾರ್ಪಣೆ!

Published : Sep 08, 2022, 10:37 PM IST

ಗುಲಾಮಗಿರಿಯ ಒಂದೇ ಒಂದು ಕುರುಹುಗಳನ್ನು ಉಳಿಸಲು ಬಿಡೋದಿಲ್ಲ ಎನ್ನುವ ಮಾತಿಗೆ ಬದ್ಧವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಸೆಂಟ್ರಲ್‌ ವಿಸ್ತಾ ಅವೆನ್ಯೂ ಲೋಕಾರ್ಪಣೆಯಾಗಿದೆ. ರಾಜಪಥ ಎನ್ನುವ ಹೆಸರಿನಲ್ಲಿ ಕರೆಸಿಕೊಳ್ಳುತ್ತಿದ್ದ ಇಂಡಿಯಾ ಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ರಸ್ತೆಗೆ ಈಗ ಕರ್ತವ್ಯ ಪಥ ಎಂದು ನಾಮಕರಣ ಮಾಡಲಾಗಿದೆ.
 

ಬೆಂಗಳೂರು (ಸೆ.8): ಇತ್ತೀಚೆಗಷ್ಟೇ ನೌಕಾಪಡೆಯ ಧ್ವಜದಲ್ಲಿ ಸೇಂಟ್‌ ಜಾರ್ಜ್‌ನ ಕ್ರಾಸ್‌ ಬದಲಾಯಿಸಿದ್ದ ನರೇಂದ್ರ ಮೋದಿ ಅದೇ ಸ್ಥಳದಲ್ಲಿ ಗುಲಾಮಗಿರಿಯ ಯಾವುದೇ ಕುರುಹುಗಳನ್ನು ಉಳಿಸಬಾರದು ಎಂದು ಹೇಳಿದ್ದರು. ಅದರಂತೆ, ಗುರುವಾರ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸೆಂಟ್ರಲ್‌ ವಿಸ್ತಾ ಅವೆನ್ಯೂವನ್ನು ಪ್ರಧಾನಿ ಮೋದಿ ಲೋಕಾಪರ್ಣೆ ಮಾಡಿದ್ದು, ಶುಕ್ರವಾರದಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ.

ಇದರ ಅನಾವರಣ ಸಂದರ್ಭದಲ್ಲಿ ಇಂಡಿಯಾಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ಮಾರ್ಗದ ಹೆಸರನ್ನು ರಾಜಪಥದ ಬದಲಾಗಿ ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಿದರು. ಅಲ್ಲದೆ, ಇಂಡಿಯಾ ಗೇಟ್‌ನಲ್ಲಿನ 28 ಅಡಿ ಎತ್ತರದ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಪ್ರತಿಮೆಯನ್ನೂ ಮೋದಿ ಅನಾವರಣ ಮಾಡಿದರು. ಈ ಸ್ಥಳದಲ್ಲಿ ಹಿಂದೆ ಬ್ರಿಟಿಷ್‌ ದೊರೆಯ ಪ್ರತಿಮೆ ಇದ್ದವು.

ಗಣರಾಜ್ಯೋತ್ಸವ ಪರೇಡ್‌ಗೆ ಸೆಂಟ್ರಲ್‌ ವಿಸ್ತಾ ಯೋಜನೆಯ ಕಾರ್ಮಿಕರಿಗೆ ಆಹ್ವಾನ: ಪ್ರಧಾನಿ ಮೋದಿ!

ಒಟ್ಟಾರೆ ಈ ಯೋಜನೆಗೆ 477 ಕೋಟಿ ವೆಚ್ಚವಾಗಿದೆ. ನವೀಕರಣಕ್ಕಾಗಿ 20 ತಿಂಗಳು ಕಾರ್ಮಿಕರು ಶ್ರಮ ವಹಿಸಿದ್ದಾರೆ. 3.9 ಲಕ್ಷ ಚದರ ಕಿಲೋಮೀಟರ್‌ ಹುಲ್ಲುಗಾವಲನ್ನು ಇಲ್ಲಿ ನಿರ್ಮಾಣ ಮಾಡಲಾಗಿದೆ. ಹೊಸ ಸೆಂಟ್ರಲ್‌ ವಿಸ್ತಾದಲ್ಲಿ ಶೀಘ್ರದಲ್ಲಿಯೇ ನೂತನ ಸಂಸತ್‌ ಭವನ ಕೂಡ ಉದ್ಘಾಟನೆಯಾಗಲಿದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?