Omicron Variant: ಒಮಿಕ್ರಾನ್‌ ನಿಯಂತ್ರಣಕ್ಕೆ ಬೂಸ್ಟರ್ ಡೋಸ್‌ನಿಂದ ಪರಿಹಾರ..?

Omicron Variant: ಒಮಿಕ್ರಾನ್‌ ನಿಯಂತ್ರಣಕ್ಕೆ ಬೂಸ್ಟರ್ ಡೋಸ್‌ನಿಂದ ಪರಿಹಾರ..?

Suvarna News   | Asianet News
Published : Dec 05, 2021, 02:55 PM ISTUpdated : Dec 05, 2021, 03:00 PM IST

ಒಮಿಕ್ರಾನ್ ತಡೆಗೆ (Omicron Variant) ದೇಶದಲ್ಲಿ 40 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್‌ ಡೋಸ್‌ (Booster Dose) ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಜಿನೋಮ್‌ ಸಿಕ್ವೆನ್ಸಿಂಗ್‌ ಕನ್ಸೋರ್ಟಿಯಂನ ವಿಜ್ಞಾನಿಗಳ ತಂಡ ಸಲಹೆ ನೀಡಿದೆ. 

ಬೆಂಗಳೂರು (ಡಿ. 04): ರಾಜಧಾನಿಯ (Bengaluru) ಇಬ್ಬರಲ್ಲಿ ಒಮಿಕ್ರೋನ್‌ ಸೋಂಕು (Omicron Variant) ಪತ್ತೆಯಾದ ಎರಡೇ ದಿನದಲ್ಲಿ ದೇಶದಲ್ಲಿ ಮತ್ತೆ ಇಬ್ಬರಿಗೆ ಈ ರೂಪಾಂತರಿ ವೈರಸ್‌ ತಗುಲಿರುವುದು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಮಿಕ್ರಾನ್ ವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 4 ಕ್ಕೇರಿದೆ. ಒಮಿಕ್ರಾನ್ ಹರಡದಂತೆ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಟಫ್‌ ರೂಲ್ಸ್ (Tough Rules) ಜಾರಿಗೊಳಿಸಿದೆ. 2 ಡೋಸ್ ಲಸಿಕೆ ಕೊಡುವುದನ್ನು ತ್ವರಿತಗೊಳಿಸಿದೆ. ಬೂಸ್ಟರ್ ಡೋಸ್ (Booster Dose) ಕೊಡಲು ಸರ್ಕಾರ ಚಿಂತನೆ ನಡೆಸಿದೆ. 

ದೇಶದಲ್ಲಿ 40 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್‌ ಡೋಸ್‌ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಜಿನೋಮ್‌ ಸಿಕ್ವೆನ್ಸಿಂಗ್‌ ಕನ್ಸೋರ್ಟಿಯಂನ ವಿಜ್ಞಾನಿಗಳ ತಂಡ ಸಲಹೆ ನೀಡಿದೆ. ಇದುವರೆಗೂ ಲಸಿಕೆ ಪಡೆಯದೆ ಇರುವವರೆಲ್ಲರಿಗೂ ಆದ್ಯತೆಯ ಮೇರೆಗೆ ಲಸಿಕೆ (Corona Vaccine) ನೀಡಬೇಕು. ರೋಗ ನಿರೋಧಕ ಸಾಮರ್ಥ್ಯ ಕಡಿಮೆ ಇರುವ 40 ವರ್ಷ ಮೇಲ್ಪಟ್ಟವರಲ್ಲಿ ಈ ವೈರಸ್‌ ಹೆಚ್ಚು ಹರಡುವ ಮತ್ತು ವೈರಸ್‌ ಬಾಧಿಸುವ ಸಾಧ್ಯತೆಯಿದೆ. ಜತೆಗೆ ಸೋಂಕಿತ ವ್ಯಕ್ತಿಯ ಜಿನೋಮ್‌ ಪರೀಕ್ಷೆಯಿಂದ ಯಾವ ವೈರಸ್‌ ಇದೆ ಎಂಬುದನ್ನು ಪತ್ತೆ ಹಚ್ಚಲು ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರೆಲ್ಲರಿಗೂ ಬೂಸ್ಟರ್‌ ಡೋಸ್‌ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಹೇಳಿದೆ.

 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್