Omicron Variant: ಒಮಿಕ್ರಾನ್‌ ನಿಯಂತ್ರಣಕ್ಕೆ ಬೂಸ್ಟರ್ ಡೋಸ್‌ನಿಂದ ಪರಿಹಾರ..?

Omicron Variant: ಒಮಿಕ್ರಾನ್‌ ನಿಯಂತ್ರಣಕ್ಕೆ ಬೂಸ್ಟರ್ ಡೋಸ್‌ನಿಂದ ಪರಿಹಾರ..?

Published : Dec 05, 2021, 02:55 PM ISTUpdated : Dec 05, 2021, 03:00 PM IST

ಒಮಿಕ್ರಾನ್ ತಡೆಗೆ (Omicron Variant) ದೇಶದಲ್ಲಿ 40 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್‌ ಡೋಸ್‌ (Booster Dose) ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಜಿನೋಮ್‌ ಸಿಕ್ವೆನ್ಸಿಂಗ್‌ ಕನ್ಸೋರ್ಟಿಯಂನ ವಿಜ್ಞಾನಿಗಳ ತಂಡ ಸಲಹೆ ನೀಡಿದೆ. 

ಬೆಂಗಳೂರು (ಡಿ. 04): ರಾಜಧಾನಿಯ (Bengaluru) ಇಬ್ಬರಲ್ಲಿ ಒಮಿಕ್ರೋನ್‌ ಸೋಂಕು (Omicron Variant) ಪತ್ತೆಯಾದ ಎರಡೇ ದಿನದಲ್ಲಿ ದೇಶದಲ್ಲಿ ಮತ್ತೆ ಇಬ್ಬರಿಗೆ ಈ ರೂಪಾಂತರಿ ವೈರಸ್‌ ತಗುಲಿರುವುದು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಮಿಕ್ರಾನ್ ವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 4 ಕ್ಕೇರಿದೆ. ಒಮಿಕ್ರಾನ್ ಹರಡದಂತೆ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಟಫ್‌ ರೂಲ್ಸ್ (Tough Rules) ಜಾರಿಗೊಳಿಸಿದೆ. 2 ಡೋಸ್ ಲಸಿಕೆ ಕೊಡುವುದನ್ನು ತ್ವರಿತಗೊಳಿಸಿದೆ. ಬೂಸ್ಟರ್ ಡೋಸ್ (Booster Dose) ಕೊಡಲು ಸರ್ಕಾರ ಚಿಂತನೆ ನಡೆಸಿದೆ. 

ದೇಶದಲ್ಲಿ 40 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್‌ ಡೋಸ್‌ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಜಿನೋಮ್‌ ಸಿಕ್ವೆನ್ಸಿಂಗ್‌ ಕನ್ಸೋರ್ಟಿಯಂನ ವಿಜ್ಞಾನಿಗಳ ತಂಡ ಸಲಹೆ ನೀಡಿದೆ. ಇದುವರೆಗೂ ಲಸಿಕೆ ಪಡೆಯದೆ ಇರುವವರೆಲ್ಲರಿಗೂ ಆದ್ಯತೆಯ ಮೇರೆಗೆ ಲಸಿಕೆ (Corona Vaccine) ನೀಡಬೇಕು. ರೋಗ ನಿರೋಧಕ ಸಾಮರ್ಥ್ಯ ಕಡಿಮೆ ಇರುವ 40 ವರ್ಷ ಮೇಲ್ಪಟ್ಟವರಲ್ಲಿ ಈ ವೈರಸ್‌ ಹೆಚ್ಚು ಹರಡುವ ಮತ್ತು ವೈರಸ್‌ ಬಾಧಿಸುವ ಸಾಧ್ಯತೆಯಿದೆ. ಜತೆಗೆ ಸೋಂಕಿತ ವ್ಯಕ್ತಿಯ ಜಿನೋಮ್‌ ಪರೀಕ್ಷೆಯಿಂದ ಯಾವ ವೈರಸ್‌ ಇದೆ ಎಂಬುದನ್ನು ಪತ್ತೆ ಹಚ್ಚಲು ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರೆಲ್ಲರಿಗೂ ಬೂಸ್ಟರ್‌ ಡೋಸ್‌ ಬಗ್ಗೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಹೇಳಿದೆ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?