ನೇಪಾಳದಲ್ಲಿ ಭೂಕಂಪ! ಸಿಕ್ಕಿಂನಲ್ಲಿ ಪ್ರವಾಹ? ಜೀವ ಉಳಿಸೋರ ಪ್ರಾಣವೇ ಅಪಾಯದಲ್ಲಿ!

ನೇಪಾಳದಲ್ಲಿ ಭೂಕಂಪ! ಸಿಕ್ಕಿಂನಲ್ಲಿ ಪ್ರವಾಹ? ಜೀವ ಉಳಿಸೋರ ಪ್ರಾಣವೇ ಅಪಾಯದಲ್ಲಿ!

Published : Oct 07, 2023, 02:21 PM IST

ಭೀಕರ ಪ್ರವಾಹಕ್ಕೆ ಮುಳುಗಿದೆ ಸಿಕ್ಕಿಂ!
ನೀರಿನಲ್ಲಿ ಕೊಚ್ಚಿ ಹೋಯ್ತು ಆಸ್ತಿಪಾಸ್ತಿ!
ಜಲಾರ್ಭಟಕ್ಕೆ ಸೇನಾ ವಾಹನಗಳೂ ಜಖಂ!
ಎಲ್ಲೆಲ್ಲೂ ನೀರು.. ಊರೆಲ್ಲಾ ಜಲಮಯ!

ಜಲಾಸುರನ ದಾಳಿಗೆ, ಸಿಕ್ಕಿಂ ತತ್ತರಿಸಿದೆ.ಬಿಟ್ಟೂಬಿಡದ ರಕ್ಕಸ ಮಳೆ.  ಡ್ಯಾಮನ್ನೇ ಛಿದ್ರಗೊಳಿಸೋ ಹಾಗೆ ನುಗ್ಗಿದ ನೀರು. ಆ ನೀರಿನ ಜೊತೆ ಬಂದೊರೋ ಮಣ್ಣು, ಇದೆಲ್ಲವೂ ಕೂಡ ಆ ಜನಕ್ಕೆ ಯಮರೂಪಿಗಳಾಗಿದ್ದಾವೆ. ಅದರ ಒಂದೊಂದು ದೃಷ್ಯ ನೋಡ್ತಿದ್ರೂ ಜೀವ ಝಲ್ ಅನ್ನುತ್ತೆ. ಇದ್ದಕ್ಕಿದ್ದ ಹಾಗೇ ಸಂಭವಿಸಿದ ಮೇಘಸ್ಪೋಟ(Cloudburst), ಇಡೀ ಸಿಕ್ಕಿಂನ ಆಪೋಷನ ತಗೋತಿದೆ. ಎಲ್ಲೆಲ್ಲೂ ನೀರು.. ಎಲ್ಲೆಲ್ಲೂ ಪ್ರವಾಹ.. ಎಲ್ಲೆಲ್ಲೂ ಭೀತಿಯ ವಾತಾವರಣವೇ ಆವರಿಸಿಕೊಂಡಿದೆ. ಸಿಕ್ಕಿಂ(Sikkim) ಇವತ್ತು ನರಕದ ತದ್ರೂಪವಾಗಿ ಬದಲಾಗಿದೆ. ಜಲಾಸುರನ ದಂಡಯಾತ್ರೆಗೆ ಒಳಗಾಗಿರೊ ಸಿಕ್ಕಂ, ಸಮಸ್ಯೆಗಳ ಸುಳಿಯೊಳಗೆ ಅಕ್ಷರಶಃ ಮುಳುಗಿ ಹೋಗಿದೆ. ಈ ಪ್ರವಾಹದಿಂದ(Flood) ಸೇನಾ ಕ್ಯಾಂಪ್ ಧ್ವಂಸವಾಗಿದೆ.. ಸುಮಾರು 23 ಮಂದಿ ಸೈನಿಕರು ನಾಪತ್ತೆಯಾಗಿದಾರೆ. ಅವರ ಪತ್ತೆ ಮಾಡೋ ಕಾರ್ಯ ಸಾಗ್ತಾ ಇದೆ.. ಅದರ ಮಧ್ಯೆ, ನದಿಯಲ್ಲಿ ಕ್ರೇಟ್ಸ್, ಪ್ಕಾಕೇಜಸ್, ಫೈರ್ ಆರ್ಮ್ಸ್ ತೇಲಿಬರ್ತಿರೋದು ವರದಿಯಾಗಿದೆ.ಅಲ್ಲಿನ ಡಿಸಿ ಹಾಗೂ ಆರ್ಮಿ ಅಧಿಕಾರಿಗಳು, ಜನಕ್ಕೇನಾದ್ರೂ ನದಿ ನೀರಲ್ಲಿ ಅಂಥಾ ಎಕ್ಸ್ಪ್ಲೋಸಿವ್ಸ್ ಸಿಕ್ಕಿದ್ರೆ, ನಮ್ ಗಮನಕ್ಕೆ ತನ್ನಿ ಅಂತ ಹೇಳಿದಾರೆ.ಪ್ರವಾಹದಲ್ಲಿ ಬರೀ ನೀರಷ್ಟೇ ಅಲ್ಲ, ಅದರ ಜೊತೆಗೆ ಮಣ್ಣೂ ಸಹ ಬಂದಿರೋದ್ರಿಂದ ಈ ಸ್ಥಿತಿ ನಿರ್ಮಾಣವಾಗಿದೆ.. ನೆಲದಲ್ಲಿದ್ದ ವಾಹನಗಳು ಮಣ್ಣಲ್ಲಿ ಹೂತು ಹೋಗಿವೆ.. ಅಷ್ಟೇ ಅಲ್ಲ, ಗ್ರೌಂಡ್ ಫ್ಲೋರಿನ ಮನೆಗಳು, ಅಂಗಡಿಗಳು ಎಲ್ಲವೂ ಮಣ್ಣಲ್ಲಿ ಮಣ್ಣಾಗಿದಾವೆ.. ಇದನ್ನೆಲ್ಲಾ ಅಗೆದಾದ ಮೇಲೆ ಅದೇನೇನು ಅವಶೇಷಗಳು ಸಿಕ್ತಾವೋ ಗೊತ್ತಿಲ್ಲ.. ಒಟ್ಟಾರೆ, ಈ ಪ್ರಾಂತ್ಯದಲ್ಲಿರೋ ಜನ, ಕರೆಂಟ್ ಇಲ್ಲದೆ, ಕುಡಿಯೋ ನೀರಲ್ಲದೆ, ಜೀವ ಉಳಿಯುತ್ತೆ ಅನ್ನೋ ಭರವಸೆ ಇಲ್ಲದೆ, ಅಂಧಕಾರದಲ್ಲಿ ಮುಳುಗಿದ್ದಾರೆ.

ಇದನ್ನೂ ವೀಕ್ಷಿಸಿ:  ಯುವ ದಸರಾ ಜಗಮಗ: ಮೊದಲ ದಿನದ ಯುವ ಸಂಭ್ರಮ ಹೇಗಿತ್ತು..?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more