ನೇಪಾಳದಲ್ಲಿ ಭೂಕಂಪ! ಸಿಕ್ಕಿಂನಲ್ಲಿ ಪ್ರವಾಹ? ಜೀವ ಉಳಿಸೋರ ಪ್ರಾಣವೇ ಅಪಾಯದಲ್ಲಿ!

ನೇಪಾಳದಲ್ಲಿ ಭೂಕಂಪ! ಸಿಕ್ಕಿಂನಲ್ಲಿ ಪ್ರವಾಹ? ಜೀವ ಉಳಿಸೋರ ಪ್ರಾಣವೇ ಅಪಾಯದಲ್ಲಿ!

Published : Oct 07, 2023, 02:21 PM IST

ಭೀಕರ ಪ್ರವಾಹಕ್ಕೆ ಮುಳುಗಿದೆ ಸಿಕ್ಕಿಂ!
ನೀರಿನಲ್ಲಿ ಕೊಚ್ಚಿ ಹೋಯ್ತು ಆಸ್ತಿಪಾಸ್ತಿ!
ಜಲಾರ್ಭಟಕ್ಕೆ ಸೇನಾ ವಾಹನಗಳೂ ಜಖಂ!
ಎಲ್ಲೆಲ್ಲೂ ನೀರು.. ಊರೆಲ್ಲಾ ಜಲಮಯ!

ಜಲಾಸುರನ ದಾಳಿಗೆ, ಸಿಕ್ಕಿಂ ತತ್ತರಿಸಿದೆ.ಬಿಟ್ಟೂಬಿಡದ ರಕ್ಕಸ ಮಳೆ.  ಡ್ಯಾಮನ್ನೇ ಛಿದ್ರಗೊಳಿಸೋ ಹಾಗೆ ನುಗ್ಗಿದ ನೀರು. ಆ ನೀರಿನ ಜೊತೆ ಬಂದೊರೋ ಮಣ್ಣು, ಇದೆಲ್ಲವೂ ಕೂಡ ಆ ಜನಕ್ಕೆ ಯಮರೂಪಿಗಳಾಗಿದ್ದಾವೆ. ಅದರ ಒಂದೊಂದು ದೃಷ್ಯ ನೋಡ್ತಿದ್ರೂ ಜೀವ ಝಲ್ ಅನ್ನುತ್ತೆ. ಇದ್ದಕ್ಕಿದ್ದ ಹಾಗೇ ಸಂಭವಿಸಿದ ಮೇಘಸ್ಪೋಟ(Cloudburst), ಇಡೀ ಸಿಕ್ಕಿಂನ ಆಪೋಷನ ತಗೋತಿದೆ. ಎಲ್ಲೆಲ್ಲೂ ನೀರು.. ಎಲ್ಲೆಲ್ಲೂ ಪ್ರವಾಹ.. ಎಲ್ಲೆಲ್ಲೂ ಭೀತಿಯ ವಾತಾವರಣವೇ ಆವರಿಸಿಕೊಂಡಿದೆ. ಸಿಕ್ಕಿಂ(Sikkim) ಇವತ್ತು ನರಕದ ತದ್ರೂಪವಾಗಿ ಬದಲಾಗಿದೆ. ಜಲಾಸುರನ ದಂಡಯಾತ್ರೆಗೆ ಒಳಗಾಗಿರೊ ಸಿಕ್ಕಂ, ಸಮಸ್ಯೆಗಳ ಸುಳಿಯೊಳಗೆ ಅಕ್ಷರಶಃ ಮುಳುಗಿ ಹೋಗಿದೆ. ಈ ಪ್ರವಾಹದಿಂದ(Flood) ಸೇನಾ ಕ್ಯಾಂಪ್ ಧ್ವಂಸವಾಗಿದೆ.. ಸುಮಾರು 23 ಮಂದಿ ಸೈನಿಕರು ನಾಪತ್ತೆಯಾಗಿದಾರೆ. ಅವರ ಪತ್ತೆ ಮಾಡೋ ಕಾರ್ಯ ಸಾಗ್ತಾ ಇದೆ.. ಅದರ ಮಧ್ಯೆ, ನದಿಯಲ್ಲಿ ಕ್ರೇಟ್ಸ್, ಪ್ಕಾಕೇಜಸ್, ಫೈರ್ ಆರ್ಮ್ಸ್ ತೇಲಿಬರ್ತಿರೋದು ವರದಿಯಾಗಿದೆ.ಅಲ್ಲಿನ ಡಿಸಿ ಹಾಗೂ ಆರ್ಮಿ ಅಧಿಕಾರಿಗಳು, ಜನಕ್ಕೇನಾದ್ರೂ ನದಿ ನೀರಲ್ಲಿ ಅಂಥಾ ಎಕ್ಸ್ಪ್ಲೋಸಿವ್ಸ್ ಸಿಕ್ಕಿದ್ರೆ, ನಮ್ ಗಮನಕ್ಕೆ ತನ್ನಿ ಅಂತ ಹೇಳಿದಾರೆ.ಪ್ರವಾಹದಲ್ಲಿ ಬರೀ ನೀರಷ್ಟೇ ಅಲ್ಲ, ಅದರ ಜೊತೆಗೆ ಮಣ್ಣೂ ಸಹ ಬಂದಿರೋದ್ರಿಂದ ಈ ಸ್ಥಿತಿ ನಿರ್ಮಾಣವಾಗಿದೆ.. ನೆಲದಲ್ಲಿದ್ದ ವಾಹನಗಳು ಮಣ್ಣಲ್ಲಿ ಹೂತು ಹೋಗಿವೆ.. ಅಷ್ಟೇ ಅಲ್ಲ, ಗ್ರೌಂಡ್ ಫ್ಲೋರಿನ ಮನೆಗಳು, ಅಂಗಡಿಗಳು ಎಲ್ಲವೂ ಮಣ್ಣಲ್ಲಿ ಮಣ್ಣಾಗಿದಾವೆ.. ಇದನ್ನೆಲ್ಲಾ ಅಗೆದಾದ ಮೇಲೆ ಅದೇನೇನು ಅವಶೇಷಗಳು ಸಿಕ್ತಾವೋ ಗೊತ್ತಿಲ್ಲ.. ಒಟ್ಟಾರೆ, ಈ ಪ್ರಾಂತ್ಯದಲ್ಲಿರೋ ಜನ, ಕರೆಂಟ್ ಇಲ್ಲದೆ, ಕುಡಿಯೋ ನೀರಲ್ಲದೆ, ಜೀವ ಉಳಿಯುತ್ತೆ ಅನ್ನೋ ಭರವಸೆ ಇಲ್ಲದೆ, ಅಂಧಕಾರದಲ್ಲಿ ಮುಳುಗಿದ್ದಾರೆ.

ಇದನ್ನೂ ವೀಕ್ಷಿಸಿ:  ಯುವ ದಸರಾ ಜಗಮಗ: ಮೊದಲ ದಿನದ ಯುವ ಸಂಭ್ರಮ ಹೇಗಿತ್ತು..?

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more